Advertisement
ಸುಳ್ಯ ಮಿರರ್

ಹೊಸ ಸರ್ಕಾರ ಬಂದಂತೆ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ಕೆಲಸ ರದ್ದು

Share

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.

ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.

ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

3 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

3 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

14 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

14 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

18 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago