Advertisement
MIRROR FOCUS

ಪುತ್ತೂರು ಮಿನಿ‌ವಿಧಾನ ಸೌಧದಲ್ಲಿ ಕೈ ಕೊಟ್ಟ ಲಿಫ್ಟ್…..!! : ವಿಕಲಚೇತನರಿಗೆ ಸಂಕಷ್ಟ

Share

ಸರ್ವ ಸುಸಜ್ಜಿತ ಪುತ್ತೂರು ಮಿನಿ‌ವಿಧಾನ ಸೌಧ. ಸಮರ್ಥ ಶಾಸಕರು. ಹಾಗಿದ್ದರೂ ಪುತ್ತೂರು ಮಿನಿವಿಧಾನ ಸೌಧದ ಲಿಫ್ಟ್ ವ್ಯವಸ್ಥೆ ಕೈಕೊಟ್ಟಿದೆ. ಇದರಿಂದಾಗಿ ವಿಕಲಚೇತನರು ಸಂಕಷ್ಟ ಪಡಬೇಕಾಗಿದೆ. ಶುಕ್ರವಾರ ವೀಲ್ ಚಯರ್ ಮೂಲಕ ವಿಕಲಚೇತನರೊಬ್ಬರನ್ನು ಕಚೇರಿಯಲ್ಲಿನ ತುರ್ತು ಕೆಲಸಕ್ಕೆ ಕರೆತಂದ ವಿಡಿಯೋ ಈಗ ವೈರಲ್ ಆಗಿದೆ.

ಪುತ್ತೂರು ಮಿನಿವಿಧಾನ ಸೌಧ ಸರ್ವ ಸುಸಜ್ಜಿತವಾಗಿ‌ ನಿರ್ಮಾಣವಾಗಿದೆ.‌ಎಲ್ಲಾ ಕಚೇರಿಗಳೂ ಒಂದೇ ಕಡೆ ಇರಬೇಕು ಎಂಬುದು ಸರಕಾರದ ಉದ್ದೇಶ. ಆದರೆ ಆರಂಭದಲ್ಲಿ ನೋಂದಣಿ‌ ಇಲಾಖೆ ಮಿನಿವಿಧಾನ ಸೌಧಕ್ಕೆ‌ ವರ್ಗಾವಣೆ ಆಗುವುದಕ್ಕೆ ನೀಡಿರುವುವ ಕಾರಣವೂ ಇದೇ ಆಗಿತ್ತು. ಅಲ್ಲಿನ ಮೇಲಿನ‌ ಮಹಡಿಗೆ ವಿಕಲಚೇತನರಿಗೆ ತೆರಳಲು ಕಷ್ಟ ಎನ್ನುವ ಮಾತಿತ್ತು.‌ಇದಕ್ಕಾಗಿ ಆಗಿನ ಸಹಾಯಕ ಕಮೀಶನರ್, ಈಗಿನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಲಿಫ್ಟ್ ವ್ಯವಸ್ಥೆ ಮಾಡಿಸಲು ಕ್ರಮ ಕೈಗೊಂಡು ಎಲ್ಲಾ ಇಲಾಖೆಗಳೂ ಒಂದೇ ಕಡೆ ಲಭ್ಯವಾಗುವಂತೆ, ವಿಕಲಚೇತನರಿಗೂ ವ್ಯವಸ್ಥೆ ಆಗುವಂತೆ ಮಾಡಿದ್ದರು.

ಇದೀಗ ಲಿಫ್ಟ್ ವ್ಯವಸ್ಥೆ ಹಾಳಾಗಿ 15 ದಿನ ಕಳೆದರೂ ದುರಸ್ತಿಯಾಗಿಲ್ಲ.‌ಹೀಗಾಗಿ ಸಮಸ್ಯೆ ಆಗಿದೆ ಎಂದು ದೂರುತ್ತಾರೆ ವಿಕಲಚೇತನರು. ಶಾಸಕರ ಕಚೇರಿಯೂ ಇದೇ ಮಿನಿವಿಧಾನ ಸೌಧದಲ್ಲಿದ್ದರೂ ವ್ಯವಸ್ಥೆ ಸುಧಾರಿಸದ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

9 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

14 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

21 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

22 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

22 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago