Advertisement
MIRROR FOCUS

ಪುತ್ತೂರು ಮಿನಿ‌ವಿಧಾನ ಸೌಧದಲ್ಲಿ ಕೈ ಕೊಟ್ಟ ಲಿಫ್ಟ್…..!! : ವಿಕಲಚೇತನರಿಗೆ ಸಂಕಷ್ಟ

Share

ಸರ್ವ ಸುಸಜ್ಜಿತ ಪುತ್ತೂರು ಮಿನಿ‌ವಿಧಾನ ಸೌಧ. ಸಮರ್ಥ ಶಾಸಕರು. ಹಾಗಿದ್ದರೂ ಪುತ್ತೂರು ಮಿನಿವಿಧಾನ ಸೌಧದ ಲಿಫ್ಟ್ ವ್ಯವಸ್ಥೆ ಕೈಕೊಟ್ಟಿದೆ. ಇದರಿಂದಾಗಿ ವಿಕಲಚೇತನರು ಸಂಕಷ್ಟ ಪಡಬೇಕಾಗಿದೆ. ಶುಕ್ರವಾರ ವೀಲ್ ಚಯರ್ ಮೂಲಕ ವಿಕಲಚೇತನರೊಬ್ಬರನ್ನು ಕಚೇರಿಯಲ್ಲಿನ ತುರ್ತು ಕೆಲಸಕ್ಕೆ ಕರೆತಂದ ವಿಡಿಯೋ ಈಗ ವೈರಲ್ ಆಗಿದೆ.

ಪುತ್ತೂರು ಮಿನಿವಿಧಾನ ಸೌಧ ಸರ್ವ ಸುಸಜ್ಜಿತವಾಗಿ‌ ನಿರ್ಮಾಣವಾಗಿದೆ.‌ಎಲ್ಲಾ ಕಚೇರಿಗಳೂ ಒಂದೇ ಕಡೆ ಇರಬೇಕು ಎಂಬುದು ಸರಕಾರದ ಉದ್ದೇಶ. ಆದರೆ ಆರಂಭದಲ್ಲಿ ನೋಂದಣಿ‌ ಇಲಾಖೆ ಮಿನಿವಿಧಾನ ಸೌಧಕ್ಕೆ‌ ವರ್ಗಾವಣೆ ಆಗುವುದಕ್ಕೆ ನೀಡಿರುವುವ ಕಾರಣವೂ ಇದೇ ಆಗಿತ್ತು. ಅಲ್ಲಿನ ಮೇಲಿನ‌ ಮಹಡಿಗೆ ವಿಕಲಚೇತನರಿಗೆ ತೆರಳಲು ಕಷ್ಟ ಎನ್ನುವ ಮಾತಿತ್ತು.‌ಇದಕ್ಕಾಗಿ ಆಗಿನ ಸಹಾಯಕ ಕಮೀಶನರ್, ಈಗಿನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಲಿಫ್ಟ್ ವ್ಯವಸ್ಥೆ ಮಾಡಿಸಲು ಕ್ರಮ ಕೈಗೊಂಡು ಎಲ್ಲಾ ಇಲಾಖೆಗಳೂ ಒಂದೇ ಕಡೆ ಲಭ್ಯವಾಗುವಂತೆ, ವಿಕಲಚೇತನರಿಗೂ ವ್ಯವಸ್ಥೆ ಆಗುವಂತೆ ಮಾಡಿದ್ದರು.

ಇದೀಗ ಲಿಫ್ಟ್ ವ್ಯವಸ್ಥೆ ಹಾಳಾಗಿ 15 ದಿನ ಕಳೆದರೂ ದುರಸ್ತಿಯಾಗಿಲ್ಲ.‌ಹೀಗಾಗಿ ಸಮಸ್ಯೆ ಆಗಿದೆ ಎಂದು ದೂರುತ್ತಾರೆ ವಿಕಲಚೇತನರು. ಶಾಸಕರ ಕಚೇರಿಯೂ ಇದೇ ಮಿನಿವಿಧಾನ ಸೌಧದಲ್ಲಿದ್ದರೂ ವ್ಯವಸ್ಥೆ ಸುಧಾರಿಸದ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

15 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

18 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

19 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

19 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

19 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago