ಸುದ್ದಿಗಳು

ಮಹಿಳೆಯನ್ನು ನುಂಗಿದ ಹೆಬ್ಬಾವು…! | ಅಪರೂಪದ ಘಟನೆ.. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾಮಾನ್ಯವಾಗಿ ಹೆಬ್ಬಾವು ಮನುಷ್ಯರನ್ನು ನುಂಗುವುದಿಲ್ಲ ಎಂಬುದು ವಾದ. ಆದರೆ ಭಾರತ ಹೊರತುಪಡಿಸಿ ಇತರ ಕೆಲವು ದೇಶಗಳಲ್ಲಿನ ಹೆಬ್ಬಾವು ಪ್ರಬೇಧವು ಮನುಷ್ಯರನ್ನೂ ನುಂಗುತ್ತವೆ. ಇಂಡೋನೇಷ್ಯಾದ ಜಾಂಬಿ ಪ್ರಾಂತ್ಯದಲ್ಲಿ ಮಹಿಳೆಯೊಬ್ಬರನ್ನು ಹೆಬ್ಬಾವು ಕೊಂದು ಸಂಪೂರ್ಣ ನುಂಗಿದೆ ಎಂದು ವರದಿಯಾಗಿದೆ.

Advertisement
Advertisement

ಸುಮಾರು 50 ವರ್ಷದ ಮಹಿಳೆ ಬೆಳಗ್ಗೆ ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದರು. ಭಾನುವಾರ ಬೆಳಗ್ಗೆ ಟ್ಯಾಪಿಂಗ್‌ ಗೆ ಹೋದವರು ನಾಪತ್ತೆಯಾಗಿದ್ದರು. ಇಡೀ ದಿನ ಅವರ ಮನೆಯವರುಯ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಆದರೆ ಟ್ಯಾಪಿಂಗದ ಸಾಮಾಗ್ರಿಗಳು ರಬ್ಬರ್‌ ತೋಟದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಗ್ರಾಮಸ್ಥರು ತಂಡಗಳ ಮೂಲಕ ಹುಡುಕಾಡಿದರು. ಈ ಸಂದರ್ಭ ಗ್ರಾಮಸ್ಥರಿಗೆ ಹೆಬ್ಬಾವು ಕಾಣಿಸಿದ್ದು, ಅದರ ಹೊಟ್ಟೆ ಮನುಷ್ಯರನ್ನೇ ಹೋಲುವ ಮಾದರಿ ಇದ್ದರಿಂದ ಸಂದೇಹದಿಂದ ಹಾವನ್ನು ಕೊಂದು ಅದರೊಳಗೆ ಪತ್ತೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದೆ.

ಹೆಬ್ಬಾವು ಮನುಷ್ಯರನ್ನು ನುಂಗುವುದು  ಅಪರೂಪದ ಘಟನೆ. ಆದರೆ ಇಂಡೋನೇಷ್ಯಾದಲ್ಲಿ ಹೆಬ್ಬಾವು ಕೊಂದು ತಿಂದಿರುವುದು ಇದೇ ಮೊದಲಲ್ಲ. 2017 ಮತ್ತು 2018 ರಲ್ಲಿ  ಇಂತಹ ಎರಡು  ಸಾವುಗಳು ವರದಿಯಾಗಿವೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

6 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

6 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

6 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

6 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

7 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

7 hours ago