Advertisement
ಸುದ್ದಿಗಳು

ಮಹಿಳೆಯನ್ನು ನುಂಗಿದ ಹೆಬ್ಬಾವು…! | ಅಪರೂಪದ ಘಟನೆ.. |

Share

ಸಾಮಾನ್ಯವಾಗಿ ಹೆಬ್ಬಾವು ಮನುಷ್ಯರನ್ನು ನುಂಗುವುದಿಲ್ಲ ಎಂಬುದು ವಾದ. ಆದರೆ ಭಾರತ ಹೊರತುಪಡಿಸಿ ಇತರ ಕೆಲವು ದೇಶಗಳಲ್ಲಿನ ಹೆಬ್ಬಾವು ಪ್ರಬೇಧವು ಮನುಷ್ಯರನ್ನೂ ನುಂಗುತ್ತವೆ. ಇಂಡೋನೇಷ್ಯಾದ ಜಾಂಬಿ ಪ್ರಾಂತ್ಯದಲ್ಲಿ ಮಹಿಳೆಯೊಬ್ಬರನ್ನು ಹೆಬ್ಬಾವು ಕೊಂದು ಸಂಪೂರ್ಣ ನುಂಗಿದೆ ಎಂದು ವರದಿಯಾಗಿದೆ.

ಸುಮಾರು 50 ವರ್ಷದ ಮಹಿಳೆ ಬೆಳಗ್ಗೆ ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದರು. ಭಾನುವಾರ ಬೆಳಗ್ಗೆ ಟ್ಯಾಪಿಂಗ್‌ ಗೆ ಹೋದವರು ನಾಪತ್ತೆಯಾಗಿದ್ದರು. ಇಡೀ ದಿನ ಅವರ ಮನೆಯವರುಯ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಆದರೆ ಟ್ಯಾಪಿಂಗದ ಸಾಮಾಗ್ರಿಗಳು ರಬ್ಬರ್‌ ತೋಟದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಗ್ರಾಮಸ್ಥರು ತಂಡಗಳ ಮೂಲಕ ಹುಡುಕಾಡಿದರು. ಈ ಸಂದರ್ಭ ಗ್ರಾಮಸ್ಥರಿಗೆ ಹೆಬ್ಬಾವು ಕಾಣಿಸಿದ್ದು, ಅದರ ಹೊಟ್ಟೆ ಮನುಷ್ಯರನ್ನೇ ಹೋಲುವ ಮಾದರಿ ಇದ್ದರಿಂದ ಸಂದೇಹದಿಂದ ಹಾವನ್ನು ಕೊಂದು ಅದರೊಳಗೆ ಪತ್ತೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದೆ.

ಹೆಬ್ಬಾವು ಮನುಷ್ಯರನ್ನು ನುಂಗುವುದು  ಅಪರೂಪದ ಘಟನೆ. ಆದರೆ ಇಂಡೋನೇಷ್ಯಾದಲ್ಲಿ ಹೆಬ್ಬಾವು ಕೊಂದು ತಿಂದಿರುವುದು ಇದೇ ಮೊದಲಲ್ಲ. 2017 ಮತ್ತು 2018 ರಲ್ಲಿ  ಇಂತಹ ಎರಡು  ಸಾವುಗಳು ವರದಿಯಾಗಿವೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

10 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

16 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

20 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago