MIRROR FOCUS

QR ಕೋಡ್ ಬಳಸಿ ಕೆಲಸಕ್ಕೆ ಬೇಡಿಕೆ ಸಲ್ಲಿಕೆ | ಫಲಾನುಭವಿಗಳಿಗೆ ಶೀಘ್ರ ತಲುಪಲು ಸಹಕಾರಿ

Share

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಧುನಿಕ ತಂತ್ರಜ್ಞಾನದಿಂದಾಗಿ ಫಲಾನುಭವಿಗಳನ್ನು ಶೀಘ್ರವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಮನ್ರೇಗಾ ಯೋಜನೆ ಅಡಿ ಅನ್ ಲೈನ್‌ನಲ್ಲಿ ಮೊಬೈಲ್ ಹಾಗೂ ಕ್ಯೂ ಆರ್ ಕೋಡ್ ಸಹಾಯದಿಂದಾಗಿ ಫಲಾನುಭವಿಗಳು ಕಚೇರಿ ಸುತ್ತುವ ಮತ್ತು ಸಮಯ ಪೋಲಾಗುವ ಸಮಸ್ಯೆಗಳಿಗೆ ಮುಕ್ತಿ ದೊರಕಿದೆ.

Advertisement

ವೈಯಕ್ತಿಕ ವಿಭಾಗದಲ್ಲಿ ಇಂಗು ಗುಂಡಿ, ಗಿಡ ನೆಡುವಿಕೆ, ಬದು ನಿರ್ಮಾಣ ಇತ್ಯಾದಿ ಕಾಮಗಾರಿಗಳು ನಡೆದರೆ, ಸಮುದಾಯ ಕಾರ್ಯಕ್ರಮಗಳ ಅಡಿ ರಸ್ತೆ, ಚರಂಡಿ, ಕೆರೆ ಹೂಳೆತ್ತುವ ಕಾಮಗಾರಿಗಳು ನಡೆಯುತ್ತಿವೆ. ಅರ್ಹ ಫಲಾನುಭವಿಗಳು ಕೆಲಸದ ಬೇಡಿಕೆ, ಪೂರ್ಣವಾದ ಕಾಮಗಾರಿಗಳ ಮಾಹಿತಿಗಳನ್ನು ಈಗ ತಾವಿರುವ ಸ್ಥಳದಿಂದಲೇ ಸುಲಭವಾಗಿ ಕ್ಯೂ ಆರ್ ಕೋಡ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಕೆಂಬೋಡಿ ಪಂಚಾಯಿತಿಯ ರೈತ ಶಿವಕುಮಾರ್, ತೈವಾನ್ ಸೀಬೆ ಕೃಷಿ ಕೈಗೊಂಡಿದ್ದು, ಮೊಬೈಲ್ ಮತ್ತು ಕ್ಯು ಆರ್ ಕೋಡ್ನಿಂದಾಗಿ ಕೆಲಸ ಸುಲಭವಾಗಿದೆ ಎನ್ನುತ್ತಾರೆ.

ಗುಡಿಪಲ್ಲಿ ಪಂಚಾಯಿತಿಯ ರೈತ ಅಶೋಕ, ಈಗ ಕೆಲಸದ ಬೇಡಿಕೆ ಸಲ್ಲಿಸಲು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಭಾಗಿಯಾಗಬೇಕಿಲ್ಲ. ಮೊಬೈಲ್ ಮತ್ತು  ಕ್ಯೂ ಆರ್ ಕೋಡ್ ಸಹಾಯದಿಂದ ತಾವಿರುವ ಸ್ಥಳದಲ್ಲೇ ಮಾಹಿತಿ ತುಂಬಬಹುದಾಗಿದೆ ಎನ್ನುತ್ತಾರೆ.

ಪಂಚಾಯ್ತಿಗಳಲ್ಲಿ ಮನ್ರೇಗಾ ಅತ್ಯಂತ ಪ್ರಚಲಿತ ಯೋಜನೆಯಾಗಿದೆ. 1 ಸಾವಿರದ  900ಕ್ಕೂ ಹೆಚ್ಚು ಕಾರ್ಡ್ ನೀಡಲಾಗಿದೆ. ವೈಯಕ್ತಿಕ, ಸಮುದಾಯ ಎರಡೂ ವಿಭಾಗದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಗುಡಿಪಲ್ಲಿ ಪಂಚಾಯಿತಿ ಪಿಡಿಒ ರಾಮೇಗೌಡ ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

35 minutes ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

1 hour ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

11 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

12 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

12 hours ago