Advertisement
MIRROR FOCUS

QR ಕೋಡ್ ಬಳಸಿ ಕೆಲಸಕ್ಕೆ ಬೇಡಿಕೆ ಸಲ್ಲಿಕೆ | ಫಲಾನುಭವಿಗಳಿಗೆ ಶೀಘ್ರ ತಲುಪಲು ಸಹಕಾರಿ

Share

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಧುನಿಕ ತಂತ್ರಜ್ಞಾನದಿಂದಾಗಿ ಫಲಾನುಭವಿಗಳನ್ನು ಶೀಘ್ರವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಮನ್ರೇಗಾ ಯೋಜನೆ ಅಡಿ ಅನ್ ಲೈನ್‌ನಲ್ಲಿ ಮೊಬೈಲ್ ಹಾಗೂ ಕ್ಯೂ ಆರ್ ಕೋಡ್ ಸಹಾಯದಿಂದಾಗಿ ಫಲಾನುಭವಿಗಳು ಕಚೇರಿ ಸುತ್ತುವ ಮತ್ತು ಸಮಯ ಪೋಲಾಗುವ ಸಮಸ್ಯೆಗಳಿಗೆ ಮುಕ್ತಿ ದೊರಕಿದೆ.

ವೈಯಕ್ತಿಕ ವಿಭಾಗದಲ್ಲಿ ಇಂಗು ಗುಂಡಿ, ಗಿಡ ನೆಡುವಿಕೆ, ಬದು ನಿರ್ಮಾಣ ಇತ್ಯಾದಿ ಕಾಮಗಾರಿಗಳು ನಡೆದರೆ, ಸಮುದಾಯ ಕಾರ್ಯಕ್ರಮಗಳ ಅಡಿ ರಸ್ತೆ, ಚರಂಡಿ, ಕೆರೆ ಹೂಳೆತ್ತುವ ಕಾಮಗಾರಿಗಳು ನಡೆಯುತ್ತಿವೆ. ಅರ್ಹ ಫಲಾನುಭವಿಗಳು ಕೆಲಸದ ಬೇಡಿಕೆ, ಪೂರ್ಣವಾದ ಕಾಮಗಾರಿಗಳ ಮಾಹಿತಿಗಳನ್ನು ಈಗ ತಾವಿರುವ ಸ್ಥಳದಿಂದಲೇ ಸುಲಭವಾಗಿ ಕ್ಯೂ ಆರ್ ಕೋಡ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಕೆಂಬೋಡಿ ಪಂಚಾಯಿತಿಯ ರೈತ ಶಿವಕುಮಾರ್, ತೈವಾನ್ ಸೀಬೆ ಕೃಷಿ ಕೈಗೊಂಡಿದ್ದು, ಮೊಬೈಲ್ ಮತ್ತು ಕ್ಯು ಆರ್ ಕೋಡ್ನಿಂದಾಗಿ ಕೆಲಸ ಸುಲಭವಾಗಿದೆ ಎನ್ನುತ್ತಾರೆ.

ಗುಡಿಪಲ್ಲಿ ಪಂಚಾಯಿತಿಯ ರೈತ ಅಶೋಕ, ಈಗ ಕೆಲಸದ ಬೇಡಿಕೆ ಸಲ್ಲಿಸಲು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಭಾಗಿಯಾಗಬೇಕಿಲ್ಲ. ಮೊಬೈಲ್ ಮತ್ತು  ಕ್ಯೂ ಆರ್ ಕೋಡ್ ಸಹಾಯದಿಂದ ತಾವಿರುವ ಸ್ಥಳದಲ್ಲೇ ಮಾಹಿತಿ ತುಂಬಬಹುದಾಗಿದೆ ಎನ್ನುತ್ತಾರೆ.

ಪಂಚಾಯ್ತಿಗಳಲ್ಲಿ ಮನ್ರೇಗಾ ಅತ್ಯಂತ ಪ್ರಚಲಿತ ಯೋಜನೆಯಾಗಿದೆ. 1 ಸಾವಿರದ  900ಕ್ಕೂ ಹೆಚ್ಚು ಕಾರ್ಡ್ ನೀಡಲಾಗಿದೆ. ವೈಯಕ್ತಿಕ, ಸಮುದಾಯ ಎರಡೂ ವಿಭಾಗದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಗುಡಿಪಲ್ಲಿ ಪಂಚಾಯಿತಿ ಪಿಡಿಒ ರಾಮೇಗೌಡ ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

4 hours ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

4 hours ago

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

13 hours ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

22 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

24 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

2 days ago