Advertisement
MIRROR FOCUS

QR ಕೋಡ್ ಬಳಸಿ ಕೆಲಸಕ್ಕೆ ಬೇಡಿಕೆ ಸಲ್ಲಿಕೆ | ಫಲಾನುಭವಿಗಳಿಗೆ ಶೀಘ್ರ ತಲುಪಲು ಸಹಕಾರಿ

Share

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಧುನಿಕ ತಂತ್ರಜ್ಞಾನದಿಂದಾಗಿ ಫಲಾನುಭವಿಗಳನ್ನು ಶೀಘ್ರವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಮನ್ರೇಗಾ ಯೋಜನೆ ಅಡಿ ಅನ್ ಲೈನ್‌ನಲ್ಲಿ ಮೊಬೈಲ್ ಹಾಗೂ ಕ್ಯೂ ಆರ್ ಕೋಡ್ ಸಹಾಯದಿಂದಾಗಿ ಫಲಾನುಭವಿಗಳು ಕಚೇರಿ ಸುತ್ತುವ ಮತ್ತು ಸಮಯ ಪೋಲಾಗುವ ಸಮಸ್ಯೆಗಳಿಗೆ ಮುಕ್ತಿ ದೊರಕಿದೆ.

ವೈಯಕ್ತಿಕ ವಿಭಾಗದಲ್ಲಿ ಇಂಗು ಗುಂಡಿ, ಗಿಡ ನೆಡುವಿಕೆ, ಬದು ನಿರ್ಮಾಣ ಇತ್ಯಾದಿ ಕಾಮಗಾರಿಗಳು ನಡೆದರೆ, ಸಮುದಾಯ ಕಾರ್ಯಕ್ರಮಗಳ ಅಡಿ ರಸ್ತೆ, ಚರಂಡಿ, ಕೆರೆ ಹೂಳೆತ್ತುವ ಕಾಮಗಾರಿಗಳು ನಡೆಯುತ್ತಿವೆ. ಅರ್ಹ ಫಲಾನುಭವಿಗಳು ಕೆಲಸದ ಬೇಡಿಕೆ, ಪೂರ್ಣವಾದ ಕಾಮಗಾರಿಗಳ ಮಾಹಿತಿಗಳನ್ನು ಈಗ ತಾವಿರುವ ಸ್ಥಳದಿಂದಲೇ ಸುಲಭವಾಗಿ ಕ್ಯೂ ಆರ್ ಕೋಡ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಕೆಂಬೋಡಿ ಪಂಚಾಯಿತಿಯ ರೈತ ಶಿವಕುಮಾರ್, ತೈವಾನ್ ಸೀಬೆ ಕೃಷಿ ಕೈಗೊಂಡಿದ್ದು, ಮೊಬೈಲ್ ಮತ್ತು ಕ್ಯು ಆರ್ ಕೋಡ್ನಿಂದಾಗಿ ಕೆಲಸ ಸುಲಭವಾಗಿದೆ ಎನ್ನುತ್ತಾರೆ.

ಗುಡಿಪಲ್ಲಿ ಪಂಚಾಯಿತಿಯ ರೈತ ಅಶೋಕ, ಈಗ ಕೆಲಸದ ಬೇಡಿಕೆ ಸಲ್ಲಿಸಲು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಭಾಗಿಯಾಗಬೇಕಿಲ್ಲ. ಮೊಬೈಲ್ ಮತ್ತು  ಕ್ಯೂ ಆರ್ ಕೋಡ್ ಸಹಾಯದಿಂದ ತಾವಿರುವ ಸ್ಥಳದಲ್ಲೇ ಮಾಹಿತಿ ತುಂಬಬಹುದಾಗಿದೆ ಎನ್ನುತ್ತಾರೆ.

ಪಂಚಾಯ್ತಿಗಳಲ್ಲಿ ಮನ್ರೇಗಾ ಅತ್ಯಂತ ಪ್ರಚಲಿತ ಯೋಜನೆಯಾಗಿದೆ. 1 ಸಾವಿರದ  900ಕ್ಕೂ ಹೆಚ್ಚು ಕಾರ್ಡ್ ನೀಡಲಾಗಿದೆ. ವೈಯಕ್ತಿಕ, ಸಮುದಾಯ ಎರಡೂ ವಿಭಾಗದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಗುಡಿಪಲ್ಲಿ ಪಂಚಾಯಿತಿ ಪಿಡಿಒ ರಾಮೇಗೌಡ ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

20 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

20 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago