ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಧುನಿಕ ತಂತ್ರಜ್ಞಾನದಿಂದಾಗಿ ಫಲಾನುಭವಿಗಳನ್ನು ಶೀಘ್ರವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಮನ್ರೇಗಾ ಯೋಜನೆ ಅಡಿ ಅನ್ ಲೈನ್ನಲ್ಲಿ ಮೊಬೈಲ್ ಹಾಗೂ ಕ್ಯೂ ಆರ್ ಕೋಡ್ ಸಹಾಯದಿಂದಾಗಿ ಫಲಾನುಭವಿಗಳು ಕಚೇರಿ ಸುತ್ತುವ ಮತ್ತು ಸಮಯ ಪೋಲಾಗುವ ಸಮಸ್ಯೆಗಳಿಗೆ ಮುಕ್ತಿ ದೊರಕಿದೆ.
ವೈಯಕ್ತಿಕ ವಿಭಾಗದಲ್ಲಿ ಇಂಗು ಗುಂಡಿ, ಗಿಡ ನೆಡುವಿಕೆ, ಬದು ನಿರ್ಮಾಣ ಇತ್ಯಾದಿ ಕಾಮಗಾರಿಗಳು ನಡೆದರೆ, ಸಮುದಾಯ ಕಾರ್ಯಕ್ರಮಗಳ ಅಡಿ ರಸ್ತೆ, ಚರಂಡಿ, ಕೆರೆ ಹೂಳೆತ್ತುವ ಕಾಮಗಾರಿಗಳು ನಡೆಯುತ್ತಿವೆ. ಅರ್ಹ ಫಲಾನುಭವಿಗಳು ಕೆಲಸದ ಬೇಡಿಕೆ, ಪೂರ್ಣವಾದ ಕಾಮಗಾರಿಗಳ ಮಾಹಿತಿಗಳನ್ನು ಈಗ ತಾವಿರುವ ಸ್ಥಳದಿಂದಲೇ ಸುಲಭವಾಗಿ ಕ್ಯೂ ಆರ್ ಕೋಡ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಕೆಂಬೋಡಿ ಪಂಚಾಯಿತಿಯ ರೈತ ಶಿವಕುಮಾರ್, ತೈವಾನ್ ಸೀಬೆ ಕೃಷಿ ಕೈಗೊಂಡಿದ್ದು, ಮೊಬೈಲ್ ಮತ್ತು ಕ್ಯು ಆರ್ ಕೋಡ್ನಿಂದಾಗಿ ಕೆಲಸ ಸುಲಭವಾಗಿದೆ ಎನ್ನುತ್ತಾರೆ.
ಗುಡಿಪಲ್ಲಿ ಪಂಚಾಯಿತಿಯ ರೈತ ಅಶೋಕ, ಈಗ ಕೆಲಸದ ಬೇಡಿಕೆ ಸಲ್ಲಿಸಲು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಭಾಗಿಯಾಗಬೇಕಿಲ್ಲ. ಮೊಬೈಲ್ ಮತ್ತು ಕ್ಯೂ ಆರ್ ಕೋಡ್ ಸಹಾಯದಿಂದ ತಾವಿರುವ ಸ್ಥಳದಲ್ಲೇ ಮಾಹಿತಿ ತುಂಬಬಹುದಾಗಿದೆ ಎನ್ನುತ್ತಾರೆ.
ಪಂಚಾಯ್ತಿಗಳಲ್ಲಿ ಮನ್ರೇಗಾ ಅತ್ಯಂತ ಪ್ರಚಲಿತ ಯೋಜನೆಯಾಗಿದೆ. 1 ಸಾವಿರದ 900ಕ್ಕೂ ಹೆಚ್ಚು ಕಾರ್ಡ್ ನೀಡಲಾಗಿದೆ. ವೈಯಕ್ತಿಕ, ಸಮುದಾಯ ಎರಡೂ ವಿಭಾಗದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಗುಡಿಪಲ್ಲಿ ಪಂಚಾಯಿತಿ ಪಿಡಿಒ ರಾಮೇಗೌಡ ಮಾಹಿತಿ ನೀಡಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…