ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಧುನಿಕ ತಂತ್ರಜ್ಞಾನದಿಂದಾಗಿ ಫಲಾನುಭವಿಗಳನ್ನು ಶೀಘ್ರವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಮನ್ರೇಗಾ ಯೋಜನೆ ಅಡಿ ಅನ್ ಲೈನ್ನಲ್ಲಿ ಮೊಬೈಲ್ ಹಾಗೂ ಕ್ಯೂ ಆರ್ ಕೋಡ್ ಸಹಾಯದಿಂದಾಗಿ ಫಲಾನುಭವಿಗಳು ಕಚೇರಿ ಸುತ್ತುವ ಮತ್ತು ಸಮಯ ಪೋಲಾಗುವ ಸಮಸ್ಯೆಗಳಿಗೆ ಮುಕ್ತಿ ದೊರಕಿದೆ.
ವೈಯಕ್ತಿಕ ವಿಭಾಗದಲ್ಲಿ ಇಂಗು ಗುಂಡಿ, ಗಿಡ ನೆಡುವಿಕೆ, ಬದು ನಿರ್ಮಾಣ ಇತ್ಯಾದಿ ಕಾಮಗಾರಿಗಳು ನಡೆದರೆ, ಸಮುದಾಯ ಕಾರ್ಯಕ್ರಮಗಳ ಅಡಿ ರಸ್ತೆ, ಚರಂಡಿ, ಕೆರೆ ಹೂಳೆತ್ತುವ ಕಾಮಗಾರಿಗಳು ನಡೆಯುತ್ತಿವೆ. ಅರ್ಹ ಫಲಾನುಭವಿಗಳು ಕೆಲಸದ ಬೇಡಿಕೆ, ಪೂರ್ಣವಾದ ಕಾಮಗಾರಿಗಳ ಮಾಹಿತಿಗಳನ್ನು ಈಗ ತಾವಿರುವ ಸ್ಥಳದಿಂದಲೇ ಸುಲಭವಾಗಿ ಕ್ಯೂ ಆರ್ ಕೋಡ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಕೆಂಬೋಡಿ ಪಂಚಾಯಿತಿಯ ರೈತ ಶಿವಕುಮಾರ್, ತೈವಾನ್ ಸೀಬೆ ಕೃಷಿ ಕೈಗೊಂಡಿದ್ದು, ಮೊಬೈಲ್ ಮತ್ತು ಕ್ಯು ಆರ್ ಕೋಡ್ನಿಂದಾಗಿ ಕೆಲಸ ಸುಲಭವಾಗಿದೆ ಎನ್ನುತ್ತಾರೆ.
ಗುಡಿಪಲ್ಲಿ ಪಂಚಾಯಿತಿಯ ರೈತ ಅಶೋಕ, ಈಗ ಕೆಲಸದ ಬೇಡಿಕೆ ಸಲ್ಲಿಸಲು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಭಾಗಿಯಾಗಬೇಕಿಲ್ಲ. ಮೊಬೈಲ್ ಮತ್ತು ಕ್ಯೂ ಆರ್ ಕೋಡ್ ಸಹಾಯದಿಂದ ತಾವಿರುವ ಸ್ಥಳದಲ್ಲೇ ಮಾಹಿತಿ ತುಂಬಬಹುದಾಗಿದೆ ಎನ್ನುತ್ತಾರೆ.
ಪಂಚಾಯ್ತಿಗಳಲ್ಲಿ ಮನ್ರೇಗಾ ಅತ್ಯಂತ ಪ್ರಚಲಿತ ಯೋಜನೆಯಾಗಿದೆ. 1 ಸಾವಿರದ 900ಕ್ಕೂ ಹೆಚ್ಚು ಕಾರ್ಡ್ ನೀಡಲಾಗಿದೆ. ವೈಯಕ್ತಿಕ, ಸಮುದಾಯ ಎರಡೂ ವಿಭಾಗದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಗುಡಿಪಲ್ಲಿ ಪಂಚಾಯಿತಿ ಪಿಡಿಒ ರಾಮೇಗೌಡ ಮಾಹಿತಿ ನೀಡಿದರು.
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…