ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಧುನಿಕ ತಂತ್ರಜ್ಞಾನದಿಂದಾಗಿ ಫಲಾನುಭವಿಗಳನ್ನು ಶೀಘ್ರವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಮನ್ರೇಗಾ ಯೋಜನೆ ಅಡಿ ಅನ್ ಲೈನ್ನಲ್ಲಿ ಮೊಬೈಲ್ ಹಾಗೂ ಕ್ಯೂ ಆರ್ ಕೋಡ್ ಸಹಾಯದಿಂದಾಗಿ ಫಲಾನುಭವಿಗಳು ಕಚೇರಿ ಸುತ್ತುವ ಮತ್ತು ಸಮಯ ಪೋಲಾಗುವ ಸಮಸ್ಯೆಗಳಿಗೆ ಮುಕ್ತಿ ದೊರಕಿದೆ.
ವೈಯಕ್ತಿಕ ವಿಭಾಗದಲ್ಲಿ ಇಂಗು ಗುಂಡಿ, ಗಿಡ ನೆಡುವಿಕೆ, ಬದು ನಿರ್ಮಾಣ ಇತ್ಯಾದಿ ಕಾಮಗಾರಿಗಳು ನಡೆದರೆ, ಸಮುದಾಯ ಕಾರ್ಯಕ್ರಮಗಳ ಅಡಿ ರಸ್ತೆ, ಚರಂಡಿ, ಕೆರೆ ಹೂಳೆತ್ತುವ ಕಾಮಗಾರಿಗಳು ನಡೆಯುತ್ತಿವೆ. ಅರ್ಹ ಫಲಾನುಭವಿಗಳು ಕೆಲಸದ ಬೇಡಿಕೆ, ಪೂರ್ಣವಾದ ಕಾಮಗಾರಿಗಳ ಮಾಹಿತಿಗಳನ್ನು ಈಗ ತಾವಿರುವ ಸ್ಥಳದಿಂದಲೇ ಸುಲಭವಾಗಿ ಕ್ಯೂ ಆರ್ ಕೋಡ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಕೆಂಬೋಡಿ ಪಂಚಾಯಿತಿಯ ರೈತ ಶಿವಕುಮಾರ್, ತೈವಾನ್ ಸೀಬೆ ಕೃಷಿ ಕೈಗೊಂಡಿದ್ದು, ಮೊಬೈಲ್ ಮತ್ತು ಕ್ಯು ಆರ್ ಕೋಡ್ನಿಂದಾಗಿ ಕೆಲಸ ಸುಲಭವಾಗಿದೆ ಎನ್ನುತ್ತಾರೆ.
ಗುಡಿಪಲ್ಲಿ ಪಂಚಾಯಿತಿಯ ರೈತ ಅಶೋಕ, ಈಗ ಕೆಲಸದ ಬೇಡಿಕೆ ಸಲ್ಲಿಸಲು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಭಾಗಿಯಾಗಬೇಕಿಲ್ಲ. ಮೊಬೈಲ್ ಮತ್ತು ಕ್ಯೂ ಆರ್ ಕೋಡ್ ಸಹಾಯದಿಂದ ತಾವಿರುವ ಸ್ಥಳದಲ್ಲೇ ಮಾಹಿತಿ ತುಂಬಬಹುದಾಗಿದೆ ಎನ್ನುತ್ತಾರೆ.
ಪಂಚಾಯ್ತಿಗಳಲ್ಲಿ ಮನ್ರೇಗಾ ಅತ್ಯಂತ ಪ್ರಚಲಿತ ಯೋಜನೆಯಾಗಿದೆ. 1 ಸಾವಿರದ 900ಕ್ಕೂ ಹೆಚ್ಚು ಕಾರ್ಡ್ ನೀಡಲಾಗಿದೆ. ವೈಯಕ್ತಿಕ, ಸಮುದಾಯ ಎರಡೂ ವಿಭಾಗದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಗುಡಿಪಲ್ಲಿ ಪಂಚಾಯಿತಿ ಪಿಡಿಒ ರಾಮೇಗೌಡ ಮಾಹಿತಿ ನೀಡಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…