Advertisement
MIRROR FOCUS

QR ಕೋಡ್ ಬಳಸಿ ಕೆಲಸಕ್ಕೆ ಬೇಡಿಕೆ ಸಲ್ಲಿಕೆ | ಫಲಾನುಭವಿಗಳಿಗೆ ಶೀಘ್ರ ತಲುಪಲು ಸಹಕಾರಿ

Share

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಧುನಿಕ ತಂತ್ರಜ್ಞಾನದಿಂದಾಗಿ ಫಲಾನುಭವಿಗಳನ್ನು ಶೀಘ್ರವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಮನ್ರೇಗಾ ಯೋಜನೆ ಅಡಿ ಅನ್ ಲೈನ್‌ನಲ್ಲಿ ಮೊಬೈಲ್ ಹಾಗೂ ಕ್ಯೂ ಆರ್ ಕೋಡ್ ಸಹಾಯದಿಂದಾಗಿ ಫಲಾನುಭವಿಗಳು ಕಚೇರಿ ಸುತ್ತುವ ಮತ್ತು ಸಮಯ ಪೋಲಾಗುವ ಸಮಸ್ಯೆಗಳಿಗೆ ಮುಕ್ತಿ ದೊರಕಿದೆ.

ವೈಯಕ್ತಿಕ ವಿಭಾಗದಲ್ಲಿ ಇಂಗು ಗುಂಡಿ, ಗಿಡ ನೆಡುವಿಕೆ, ಬದು ನಿರ್ಮಾಣ ಇತ್ಯಾದಿ ಕಾಮಗಾರಿಗಳು ನಡೆದರೆ, ಸಮುದಾಯ ಕಾರ್ಯಕ್ರಮಗಳ ಅಡಿ ರಸ್ತೆ, ಚರಂಡಿ, ಕೆರೆ ಹೂಳೆತ್ತುವ ಕಾಮಗಾರಿಗಳು ನಡೆಯುತ್ತಿವೆ. ಅರ್ಹ ಫಲಾನುಭವಿಗಳು ಕೆಲಸದ ಬೇಡಿಕೆ, ಪೂರ್ಣವಾದ ಕಾಮಗಾರಿಗಳ ಮಾಹಿತಿಗಳನ್ನು ಈಗ ತಾವಿರುವ ಸ್ಥಳದಿಂದಲೇ ಸುಲಭವಾಗಿ ಕ್ಯೂ ಆರ್ ಕೋಡ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಕೆಂಬೋಡಿ ಪಂಚಾಯಿತಿಯ ರೈತ ಶಿವಕುಮಾರ್, ತೈವಾನ್ ಸೀಬೆ ಕೃಷಿ ಕೈಗೊಂಡಿದ್ದು, ಮೊಬೈಲ್ ಮತ್ತು ಕ್ಯು ಆರ್ ಕೋಡ್ನಿಂದಾಗಿ ಕೆಲಸ ಸುಲಭವಾಗಿದೆ ಎನ್ನುತ್ತಾರೆ.

ಗುಡಿಪಲ್ಲಿ ಪಂಚಾಯಿತಿಯ ರೈತ ಅಶೋಕ, ಈಗ ಕೆಲಸದ ಬೇಡಿಕೆ ಸಲ್ಲಿಸಲು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಭಾಗಿಯಾಗಬೇಕಿಲ್ಲ. ಮೊಬೈಲ್ ಮತ್ತು  ಕ್ಯೂ ಆರ್ ಕೋಡ್ ಸಹಾಯದಿಂದ ತಾವಿರುವ ಸ್ಥಳದಲ್ಲೇ ಮಾಹಿತಿ ತುಂಬಬಹುದಾಗಿದೆ ಎನ್ನುತ್ತಾರೆ.

ಪಂಚಾಯ್ತಿಗಳಲ್ಲಿ ಮನ್ರೇಗಾ ಅತ್ಯಂತ ಪ್ರಚಲಿತ ಯೋಜನೆಯಾಗಿದೆ. 1 ಸಾವಿರದ  900ಕ್ಕೂ ಹೆಚ್ಚು ಕಾರ್ಡ್ ನೀಡಲಾಗಿದೆ. ವೈಯಕ್ತಿಕ, ಸಮುದಾಯ ಎರಡೂ ವಿಭಾಗದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಗುಡಿಪಲ್ಲಿ ಪಂಚಾಯಿತಿ ಪಿಡಿಒ ರಾಮೇಗೌಡ ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

4 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

13 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

13 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

14 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

16 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

1 day ago