Advertisement
MIRROR FOCUS

#Rain | ದುರ್ಬಲಗೊಂಡ ಮುಂಗಾರು | ಭಾರತದ ಕಾಲು ಭಾಗವು ಮಳೆಯ ಕೊರತೆ ಎದುರಿಸುತ್ತಿದೆ…! |

Share

ಕಳೆದ 5 ವರ್ಷಗಳಿಂದ ಮುಂಗಾರು ಮಳೆಯ ಸ್ಥಿತಿ ಬದಲಾಗುತ್ತಿದೆ. ಇದೀಗ ಈ ವರ್ಷ ಮಳೆಯ ಕೊರತೆ ಇಡೀ ದೇಶದಲ್ಲಿ ಕಾಡುತ್ತಿದೆ. ಈಗಿನ ಪ್ರಕಾರ ಭಾರತದ ಭೂಪ್ರದೇಶದ ಕಾಲುಭಾಗವು ಬರ ಮಾದರಿಯ ಪರಿಣಾಮವನ್ನು  ಎದುರಿಸುತ್ತಿದೆ. ಮುಂಗಾರು ತೀರಾ ದುರ್ಬಲವಾಗಿದೆ. 

Advertisement
Advertisement
Advertisement
Advertisement

ಭಾರತದಲ್ಲಿ ಏಪ್ರಿಲ್‌ ತಿಂಗಳಿನಿಂದ ಮಳೆಯ ನಿರೀಕ್ಷೆ ಆರಂಭವಾಗಿದೆ. ಅಂದಿನಿಂದಲೇ ಬರಗಾಲದ ಪರಿಸ್ಥಿತಿ ಎದುರಿಸಬೇಕಾಗಿ ಬಂದಿದೆ. ಕೆಲವು ರಾಜ್ಯಗಳಲ್ಲಿ, ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಆದರೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್‌ನಲ್ಲಿ ಕೂಡಾ ವಾಡಿಕೆಗಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ದೇಶದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾದರೂ ಕನಿಷ್ಠ 25.1 ಶೇ ಪ್ರದೇಶವು ಬರಗಾಲದಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮುಂಬರುವ ವಾರಗಳಲ್ಲಿ ಮತ್ತೆ ದುರ್ಬಲ ಮುಂಗಾರು ಮುಂದುವರಿಯಲಿದ್ದು, ದೇಶದ ಕೃಷಿ ಪರಿಸ್ಥಿತಿ ಸಂಕಷ್ಟಕ್ಕೆ ಬರಲಿದೆ.

Advertisement

ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳದ ಪೂರ್ವ ರಾಜ್ಯಗಳು, ಪೂರ್ವ ಉತ್ತರ ಪ್ರದೇಶ, ಈಶಾನ್ಯ ರಾಜ್ಯಗಳಾದ ಮಣಿಪುರ, ಅರುಣಾಚಲ ಪ್ರದೇಶ ಮತ್ತು ಅಸ್ಸಾಂ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಮರುಭೂಮಿ ಪ್ರದೇಶಗಳ ಕೆಲವು  ಭಾಗಗಳಲ್ಲಿ ಬರಗಾಲವು ಹೆಚ್ಚಾಗಿ ಆವರಿಸಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ಆದರೆ ನಿರೀಕ್ಷೆಯಷ್ಟು ಮಳೆಯಾಗಿಲ್ಲ.

ಭಾರತದ ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ,  ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಜುಲೈ 31 ರವರೆಗೆ ಶೇ 22 ರಷ್ಟು ಮಳೆ ಕೊರತೆಯಿದೆ.

Advertisement

ಜುಲೈ 31 ರಂದು, ಹವಾಮಾನ ಇಲಾಖೆಯು ತನ್ನ ಅಧಿಕೃತ ಹೇಳಿಕೆಯಲ್ಲಿ, 2023 ರ ನೈಋತ್ಯ ಮಾನ್ಸೂನ್ ಋತುವಿನ ಆಗಸ್ಟ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟಾರೆಯಾಗಿ ದೇಶದಾದ್ಯಂತ ಮಳೆಯು ಸಾಮಾನ್ಯವಾಗಿರುವ ಸಾಧ್ಯತೆಯಿದೆ ಎಂದು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

7 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

13 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

1 day ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

1 day ago