Advertisement
MIRROR FOCUS

#Rain | ದುರ್ಬಲಗೊಂಡ ಮುಂಗಾರು | ಭಾರತದ ಕಾಲು ಭಾಗವು ಮಳೆಯ ಕೊರತೆ ಎದುರಿಸುತ್ತಿದೆ…! |

Share

ಕಳೆದ 5 ವರ್ಷಗಳಿಂದ ಮುಂಗಾರು ಮಳೆಯ ಸ್ಥಿತಿ ಬದಲಾಗುತ್ತಿದೆ. ಇದೀಗ ಈ ವರ್ಷ ಮಳೆಯ ಕೊರತೆ ಇಡೀ ದೇಶದಲ್ಲಿ ಕಾಡುತ್ತಿದೆ. ಈಗಿನ ಪ್ರಕಾರ ಭಾರತದ ಭೂಪ್ರದೇಶದ ಕಾಲುಭಾಗವು ಬರ ಮಾದರಿಯ ಪರಿಣಾಮವನ್ನು  ಎದುರಿಸುತ್ತಿದೆ. ಮುಂಗಾರು ತೀರಾ ದುರ್ಬಲವಾಗಿದೆ. 

ಭಾರತದಲ್ಲಿ ಏಪ್ರಿಲ್‌ ತಿಂಗಳಿನಿಂದ ಮಳೆಯ ನಿರೀಕ್ಷೆ ಆರಂಭವಾಗಿದೆ. ಅಂದಿನಿಂದಲೇ ಬರಗಾಲದ ಪರಿಸ್ಥಿತಿ ಎದುರಿಸಬೇಕಾಗಿ ಬಂದಿದೆ. ಕೆಲವು ರಾಜ್ಯಗಳಲ್ಲಿ, ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಆದರೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್‌ನಲ್ಲಿ ಕೂಡಾ ವಾಡಿಕೆಗಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ದೇಶದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾದರೂ ಕನಿಷ್ಠ 25.1 ಶೇ ಪ್ರದೇಶವು ಬರಗಾಲದಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮುಂಬರುವ ವಾರಗಳಲ್ಲಿ ಮತ್ತೆ ದುರ್ಬಲ ಮುಂಗಾರು ಮುಂದುವರಿಯಲಿದ್ದು, ದೇಶದ ಕೃಷಿ ಪರಿಸ್ಥಿತಿ ಸಂಕಷ್ಟಕ್ಕೆ ಬರಲಿದೆ.

ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳದ ಪೂರ್ವ ರಾಜ್ಯಗಳು, ಪೂರ್ವ ಉತ್ತರ ಪ್ರದೇಶ, ಈಶಾನ್ಯ ರಾಜ್ಯಗಳಾದ ಮಣಿಪುರ, ಅರುಣಾಚಲ ಪ್ರದೇಶ ಮತ್ತು ಅಸ್ಸಾಂ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಮರುಭೂಮಿ ಪ್ರದೇಶಗಳ ಕೆಲವು  ಭಾಗಗಳಲ್ಲಿ ಬರಗಾಲವು ಹೆಚ್ಚಾಗಿ ಆವರಿಸಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ಆದರೆ ನಿರೀಕ್ಷೆಯಷ್ಟು ಮಳೆಯಾಗಿಲ್ಲ.

ಭಾರತದ ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ,  ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಜುಲೈ 31 ರವರೆಗೆ ಶೇ 22 ರಷ್ಟು ಮಳೆ ಕೊರತೆಯಿದೆ.

ಜುಲೈ 31 ರಂದು, ಹವಾಮಾನ ಇಲಾಖೆಯು ತನ್ನ ಅಧಿಕೃತ ಹೇಳಿಕೆಯಲ್ಲಿ, 2023 ರ ನೈಋತ್ಯ ಮಾನ್ಸೂನ್ ಋತುವಿನ ಆಗಸ್ಟ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟಾರೆಯಾಗಿ ದೇಶದಾದ್ಯಂತ ಮಳೆಯು ಸಾಮಾನ್ಯವಾಗಿರುವ ಸಾಧ್ಯತೆಯಿದೆ ಎಂದು ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

20 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago