Advertisement
MIRROR FOCUS

#Rain | ದುರ್ಬಲಗೊಂಡ ಮುಂಗಾರು | ಭಾರತದ ಕಾಲು ಭಾಗವು ಮಳೆಯ ಕೊರತೆ ಎದುರಿಸುತ್ತಿದೆ…! |

Share

ಕಳೆದ 5 ವರ್ಷಗಳಿಂದ ಮುಂಗಾರು ಮಳೆಯ ಸ್ಥಿತಿ ಬದಲಾಗುತ್ತಿದೆ. ಇದೀಗ ಈ ವರ್ಷ ಮಳೆಯ ಕೊರತೆ ಇಡೀ ದೇಶದಲ್ಲಿ ಕಾಡುತ್ತಿದೆ. ಈಗಿನ ಪ್ರಕಾರ ಭಾರತದ ಭೂಪ್ರದೇಶದ ಕಾಲುಭಾಗವು ಬರ ಮಾದರಿಯ ಪರಿಣಾಮವನ್ನು  ಎದುರಿಸುತ್ತಿದೆ. ಮುಂಗಾರು ತೀರಾ ದುರ್ಬಲವಾಗಿದೆ. 

ಭಾರತದಲ್ಲಿ ಏಪ್ರಿಲ್‌ ತಿಂಗಳಿನಿಂದ ಮಳೆಯ ನಿರೀಕ್ಷೆ ಆರಂಭವಾಗಿದೆ. ಅಂದಿನಿಂದಲೇ ಬರಗಾಲದ ಪರಿಸ್ಥಿತಿ ಎದುರಿಸಬೇಕಾಗಿ ಬಂದಿದೆ. ಕೆಲವು ರಾಜ್ಯಗಳಲ್ಲಿ, ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಆದರೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್‌ನಲ್ಲಿ ಕೂಡಾ ವಾಡಿಕೆಗಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ದೇಶದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾದರೂ ಕನಿಷ್ಠ 25.1 ಶೇ ಪ್ರದೇಶವು ಬರಗಾಲದಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮುಂಬರುವ ವಾರಗಳಲ್ಲಿ ಮತ್ತೆ ದುರ್ಬಲ ಮುಂಗಾರು ಮುಂದುವರಿಯಲಿದ್ದು, ದೇಶದ ಕೃಷಿ ಪರಿಸ್ಥಿತಿ ಸಂಕಷ್ಟಕ್ಕೆ ಬರಲಿದೆ.

ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳದ ಪೂರ್ವ ರಾಜ್ಯಗಳು, ಪೂರ್ವ ಉತ್ತರ ಪ್ರದೇಶ, ಈಶಾನ್ಯ ರಾಜ್ಯಗಳಾದ ಮಣಿಪುರ, ಅರುಣಾಚಲ ಪ್ರದೇಶ ಮತ್ತು ಅಸ್ಸಾಂ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಮರುಭೂಮಿ ಪ್ರದೇಶಗಳ ಕೆಲವು  ಭಾಗಗಳಲ್ಲಿ ಬರಗಾಲವು ಹೆಚ್ಚಾಗಿ ಆವರಿಸಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ಆದರೆ ನಿರೀಕ್ಷೆಯಷ್ಟು ಮಳೆಯಾಗಿಲ್ಲ.

ಭಾರತದ ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ,  ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಜುಲೈ 31 ರವರೆಗೆ ಶೇ 22 ರಷ್ಟು ಮಳೆ ಕೊರತೆಯಿದೆ.

ಜುಲೈ 31 ರಂದು, ಹವಾಮಾನ ಇಲಾಖೆಯು ತನ್ನ ಅಧಿಕೃತ ಹೇಳಿಕೆಯಲ್ಲಿ, 2023 ರ ನೈಋತ್ಯ ಮಾನ್ಸೂನ್ ಋತುವಿನ ಆಗಸ್ಟ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟಾರೆಯಾಗಿ ದೇಶದಾದ್ಯಂತ ಮಳೆಯು ಸಾಮಾನ್ಯವಾಗಿರುವ ಸಾಧ್ಯತೆಯಿದೆ ಎಂದು ಹೇಳಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

3 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

12 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

20 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

20 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago