Advertisement
MIRROR FOCUS

#Rain | ದುರ್ಬಲಗೊಂಡ ಮುಂಗಾರು | ಭಾರತದ ಕಾಲು ಭಾಗವು ಮಳೆಯ ಕೊರತೆ ಎದುರಿಸುತ್ತಿದೆ…! |

Share

ಕಳೆದ 5 ವರ್ಷಗಳಿಂದ ಮುಂಗಾರು ಮಳೆಯ ಸ್ಥಿತಿ ಬದಲಾಗುತ್ತಿದೆ. ಇದೀಗ ಈ ವರ್ಷ ಮಳೆಯ ಕೊರತೆ ಇಡೀ ದೇಶದಲ್ಲಿ ಕಾಡುತ್ತಿದೆ. ಈಗಿನ ಪ್ರಕಾರ ಭಾರತದ ಭೂಪ್ರದೇಶದ ಕಾಲುಭಾಗವು ಬರ ಮಾದರಿಯ ಪರಿಣಾಮವನ್ನು  ಎದುರಿಸುತ್ತಿದೆ. ಮುಂಗಾರು ತೀರಾ ದುರ್ಬಲವಾಗಿದೆ. 

ಭಾರತದಲ್ಲಿ ಏಪ್ರಿಲ್‌ ತಿಂಗಳಿನಿಂದ ಮಳೆಯ ನಿರೀಕ್ಷೆ ಆರಂಭವಾಗಿದೆ. ಅಂದಿನಿಂದಲೇ ಬರಗಾಲದ ಪರಿಸ್ಥಿತಿ ಎದುರಿಸಬೇಕಾಗಿ ಬಂದಿದೆ. ಕೆಲವು ರಾಜ್ಯಗಳಲ್ಲಿ, ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಆದರೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್‌ನಲ್ಲಿ ಕೂಡಾ ವಾಡಿಕೆಗಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ದೇಶದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾದರೂ ಕನಿಷ್ಠ 25.1 ಶೇ ಪ್ರದೇಶವು ಬರಗಾಲದಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮುಂಬರುವ ವಾರಗಳಲ್ಲಿ ಮತ್ತೆ ದುರ್ಬಲ ಮುಂಗಾರು ಮುಂದುವರಿಯಲಿದ್ದು, ದೇಶದ ಕೃಷಿ ಪರಿಸ್ಥಿತಿ ಸಂಕಷ್ಟಕ್ಕೆ ಬರಲಿದೆ.

ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳದ ಪೂರ್ವ ರಾಜ್ಯಗಳು, ಪೂರ್ವ ಉತ್ತರ ಪ್ರದೇಶ, ಈಶಾನ್ಯ ರಾಜ್ಯಗಳಾದ ಮಣಿಪುರ, ಅರುಣಾಚಲ ಪ್ರದೇಶ ಮತ್ತು ಅಸ್ಸಾಂ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಮರುಭೂಮಿ ಪ್ರದೇಶಗಳ ಕೆಲವು  ಭಾಗಗಳಲ್ಲಿ ಬರಗಾಲವು ಹೆಚ್ಚಾಗಿ ಆವರಿಸಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ಆದರೆ ನಿರೀಕ್ಷೆಯಷ್ಟು ಮಳೆಯಾಗಿಲ್ಲ.

ಭಾರತದ ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ,  ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಜುಲೈ 31 ರವರೆಗೆ ಶೇ 22 ರಷ್ಟು ಮಳೆ ಕೊರತೆಯಿದೆ.

ಜುಲೈ 31 ರಂದು, ಹವಾಮಾನ ಇಲಾಖೆಯು ತನ್ನ ಅಧಿಕೃತ ಹೇಳಿಕೆಯಲ್ಲಿ, 2023 ರ ನೈಋತ್ಯ ಮಾನ್ಸೂನ್ ಋತುವಿನ ಆಗಸ್ಟ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟಾರೆಯಾಗಿ ದೇಶದಾದ್ಯಂತ ಮಳೆಯು ಸಾಮಾನ್ಯವಾಗಿರುವ ಸಾಧ್ಯತೆಯಿದೆ ಎಂದು ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago