ಕಿರು ಉದ್ದಿಮೆಗಳಿಗೆ ತ್ವರಿತ ಸಾಲ ಮಂಜೂರು – ಬ್ಯಾಂಕ್‍ಗಳಿಗೆ ದ ಕ ಸಂಸದರ ಸೂಚನೆ

September 4, 2025
7:33 AM

ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಸಾಲ ಮಂಜೂರಾತಿಯನ್ನು  ಬ್ಯಾಂಕುಗಳು ತ್ವರಿತವಾಗಿ ಮಾಡಲು ಲೋಕಸಭಾ  ಸದಸ್ಯ  ಕ್ಯಾಪ್ಟನ್  ಬ್ರಿಜೇಶ್ ಚೌಟ ಸೂಚಿಸಿದ್ದಾರೆ.’

ಅವರು  ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಬುಧವಾರ  ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ   ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಒಂದು ದಿನದ ‘ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೈಯಕ್ತಿಕ ಉದ್ದಿಮೆ, ಗೃಹ ಉತ್ಪಾದನೆ ಉತ್ಪಾದನೆ ಹಾಗೂ ಆಹಾರ ಸಂಸ್ಕರಣಾ  ಉದ್ದಿಮೆ  ಸೇರಿದಂತೆ ವಿವಿಧ ಕಿರು ಉದ್ಯಮಗಳಿಗೆ ನೆರವು ನೀಡಲು ಕೇಂದ್ರ ಸರಕಾರದ ಹಲವಾರು ಯೋಜನೆಗಳಿಗೆ  ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆದರೆ ಬ್ಯಾಂಕುಗಳು ಸಾಲ ಮಂಜೂರಾತಿಗೆ  ಸತಾಯಿಸುತ್ತಿರುವ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದಲೇ ಯೋಜನೆಯ ಮೂಲ ಉದ್ದೇಶವೇ ಈಡೇರುವುದಿಲ್ಲ. ಈ ನಿಟ್ಟಿನಲ್ಲಿ ಬ್ಯಾಂಕುಗಳಲ್ಲಿ ಕಿರು ಆಹಾರ ಸಂಸ್ಕರಣೆ ಘಟಕಗಳ ಸಾಲ ಮಂಜೂರಾತಿ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ನಡೆಸಬೇಕು ಎಂದು ಸಂಸದರು ಸೂಚಿಸಿದರು.

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯು  ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ  ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ದೇಶಾದ್ಯಂತ ಈ ಯೋಜನೆಯಡಿ 2 ಲಕ್ಷ ಸಣ್ಣ ಉದ್ಯಮಶೀಲರನ್ನು  ಹಣಕಾಸು ಬೆಂಬಲ ನೀಡುವ ಉದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.

ಕೃಷಿ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ ಮಾತನಾಡಿ ಈ ಯೋಜನೆಯಡಿ ಗರಿಷ್ಠ 15 ಲಕ್ಷದ ಸಬ್ಸಿಡಿ ದೊರಕಲಿದೆ. ಕೇಂದ್ರ ಸರಕಾರದ  35%  ಹಾಗೂ  ರಾಜ್ಯ ಸರ್ಕಾರದ 15 % ಪಾಲು ಇದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಂಟಿ ಕೈಗಾರಿಕಾ ನಿರ್ದೇಶಕ ಗೋಕುಲದಾಸ್, ಕೆಪೆಕ್ ಅಧಿಕಾರಿ  ಅರವಿಂದ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕಿ ಕವಿತಾ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಕೃಷಿ ಉಪನಿರ್ದೇಶಕರಾದ  ಕುಮುದಾ ಸ್ವಾಗತಿಸಿ, ಉಪನಿರ್ದೇಶಕ ಶಿವಶಂಕರ್ ದಾನೇಗೊಂಡಲ್ ನಿರೂಪಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror