Advertisement
MIRROR FOCUS

ಕಿರು ಉದ್ದಿಮೆಗಳಿಗೆ ತ್ವರಿತ ಸಾಲ ಮಂಜೂರು – ಬ್ಯಾಂಕ್‍ಗಳಿಗೆ ದ ಕ ಸಂಸದರ ಸೂಚನೆ

Share

ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಸಾಲ ಮಂಜೂರಾತಿಯನ್ನು  ಬ್ಯಾಂಕುಗಳು ತ್ವರಿತವಾಗಿ ಮಾಡಲು ಲೋಕಸಭಾ  ಸದಸ್ಯ  ಕ್ಯಾಪ್ಟನ್  ಬ್ರಿಜೇಶ್ ಚೌಟ ಸೂಚಿಸಿದ್ದಾರೆ.’

ಅವರು  ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಬುಧವಾರ  ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ   ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಒಂದು ದಿನದ ‘ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೈಯಕ್ತಿಕ ಉದ್ದಿಮೆ, ಗೃಹ ಉತ್ಪಾದನೆ ಉತ್ಪಾದನೆ ಹಾಗೂ ಆಹಾರ ಸಂಸ್ಕರಣಾ  ಉದ್ದಿಮೆ  ಸೇರಿದಂತೆ ವಿವಿಧ ಕಿರು ಉದ್ಯಮಗಳಿಗೆ ನೆರವು ನೀಡಲು ಕೇಂದ್ರ ಸರಕಾರದ ಹಲವಾರು ಯೋಜನೆಗಳಿಗೆ  ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆದರೆ ಬ್ಯಾಂಕುಗಳು ಸಾಲ ಮಂಜೂರಾತಿಗೆ  ಸತಾಯಿಸುತ್ತಿರುವ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದಲೇ ಯೋಜನೆಯ ಮೂಲ ಉದ್ದೇಶವೇ ಈಡೇರುವುದಿಲ್ಲ. ಈ ನಿಟ್ಟಿನಲ್ಲಿ ಬ್ಯಾಂಕುಗಳಲ್ಲಿ ಕಿರು ಆಹಾರ ಸಂಸ್ಕರಣೆ ಘಟಕಗಳ ಸಾಲ ಮಂಜೂರಾತಿ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ನಡೆಸಬೇಕು ಎಂದು ಸಂಸದರು ಸೂಚಿಸಿದರು.

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯು  ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ  ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ದೇಶಾದ್ಯಂತ ಈ ಯೋಜನೆಯಡಿ 2 ಲಕ್ಷ ಸಣ್ಣ ಉದ್ಯಮಶೀಲರನ್ನು  ಹಣಕಾಸು ಬೆಂಬಲ ನೀಡುವ ಉದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.

ಕೃಷಿ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ ಮಾತನಾಡಿ ಈ ಯೋಜನೆಯಡಿ ಗರಿಷ್ಠ 15 ಲಕ್ಷದ ಸಬ್ಸಿಡಿ ದೊರಕಲಿದೆ. ಕೇಂದ್ರ ಸರಕಾರದ  35%  ಹಾಗೂ  ರಾಜ್ಯ ಸರ್ಕಾರದ 15 % ಪಾಲು ಇದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಂಟಿ ಕೈಗಾರಿಕಾ ನಿರ್ದೇಶಕ ಗೋಕುಲದಾಸ್, ಕೆಪೆಕ್ ಅಧಿಕಾರಿ  ಅರವಿಂದ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕಿ ಕವಿತಾ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಕೃಷಿ ಉಪನಿರ್ದೇಶಕರಾದ  ಕುಮುದಾ ಸ್ವಾಗತಿಸಿ, ಉಪನಿರ್ದೇಶಕ ಶಿವಶಂಕರ್ ದಾನೇಗೊಂಡಲ್ ನಿರೂಪಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

56 minutes ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

10 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

14 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

14 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago

ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…

1 day ago