ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು

March 24, 2025
8:52 PM
ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ.

ದೇಶದಲ್ಲಿ ಹಲವಾರು ಕೃಷಿ ಸಂಶೋಧನೆಗಳು ನಡೆಯುತ್ತವೆ. ವಿನೂತನವಾದ ತಂತ್ರಜ್ಞಾನಗಳನ್ನು ವಿಜ್ಞಾನಿಗಳು ಕಂಡುಹಿಡಿಯುತ್ತಾರೆ. ಆಧುನಿಕ ಕೃಷಿ ಪದ್ದತಿಗಳ ಬಗ್ಗೆಯೂ ಅಧ್ಯಯನ ಮಾಡುತ್ತಾರೆ. ಆದರೆ ಈ ಅಧ್ಯಯನಗಳು ಕೃಷಿ ಭೂಮಿಗೆ ತಲಪುವುದು, ರೈತರಿಗೆ ತಲಪುವುದು ತಡವಾಗುತ್ತದೆ.  ರೈತರಿಗೆ ತಲಪಿಸುವುದು ವಿಜ್ಞಾನಿಗಳ ಕೆಲಸವಲ್ಲ.  ಹೀಗಾಗಿ ಈಗ ಪ್ರಯೋಗಾಲಯಗಳಲ್ಲಿ ನಡೆಯುವ ಸಂಶೋಧನೆಗಳು ಶೀಘ್ರದಲ್ಲಿ ಕೃಷಿ ಭೂಮಿಗೆ ತಲಪಿಸುವ ವ್ಯವಸ್ಥೆ ಆಗಬೇಕಾಗಿದೆ. ಈ ಬಗ್ಗೆ ದೇಶದ ಕೃಷಿ ಸಚಿವಾಲಯದ ಆಸಕ್ತಿ ವಹಿಸಿದೆ. ಈ ಬಗ್ಗೆ ಕೃಷಿ ಸಚಿವರು ಕಳೆದ ವಾರದ ನಡೆದ ಕಾರ್ಯಕ್ರಮದಲ್ಲಿ ಈ ವಿಷಯ ಫೋಕಸ್‌ ಮಾಡಿದರು.

ರೈತರಿಗೆ ಅನುಕೂಲವಾಗುವಂತೆ ಪ್ರಯೋಗಾಲಯಗಳಿಂದ ಹೊಲಗಳಿಗೆ ಕೃಷಿ ತಂತ್ರಜ್ಞಾನಗಳನ್ನು ವೇಗವಾಗಿ ವರ್ಗಾಯಿಸುವ ಅಗತ್ಯದ ಬಗ್ಗೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಹೇಳಿದರು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ 63 ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಜಾಗತಿಕ ಸವಾಲುಗಳನ್ನು ಎದುರಿಸಲು ಕೃಷಿ ಯಂತ್ರೋಪಕರಣಗಳು, ಸ್ಮಾರ್ಟ್ ಕೃಷಿ ಮತ್ತು ಮುಂದುವರಿದ ಡಿಜಿಟಲ್ ತಂತ್ರಜ್ಞಾನಗಳ ಅಳವಡಿಕೆ ಕೃಷಿಯಲ್ಲಿ ಅಗತ್ಯ ಇರುವುದರ ಬಗ್ಗೆ ಸಚಿವರು ಗಮನ ಸೆಳೆದರು. ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ ಎಂದು ಅವರು ಹೇಳಿದರು.

ಭಾರತದ ಕೃಷಿ ಬೆಳವಣಿಗೆ ದರವು ಪ್ರಸ್ತುತ ಶೇಕಡಾ 5 ರಷ್ಟಿದೆ, ಸದ್ಯ ರೈತರ  ಪ್ರಯತ್ನಗಳಿಂದಾಗಿ ಆಹಾರ ಉತ್ಪಾದನೆಯೂ ಉತ್ತಮವಾಗಿದೆ. ಆದರೆ ಸುಸ್ಥಿರ ಕೃಷಿ, ಹವಾಮಾನ-ನಿರೋಧಕ ಕೃಷಿ,  ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಅಗತ್ಯ ಇದೆ ಎಂದು ಸಚಿವರು ಎಚ್ಚರಿಸಿದರು. ಸಂಶೋಧನೆ,  ಉದ್ಯಮಶೀಲತೆ ಮತ್ತು ನವೋದ್ಯಮಗಳ ಮೂಲಕ ಕೃಷಿ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು, ಯುವಜನತೆ ಗಮನಹರಿಸಬೇಕು ಎಂದು ಸಚಿವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror