ದೇಶದಲ್ಲಿ ಹಲವಾರು ಕೃಷಿ ಸಂಶೋಧನೆಗಳು ನಡೆಯುತ್ತವೆ. ವಿನೂತನವಾದ ತಂತ್ರಜ್ಞಾನಗಳನ್ನು ವಿಜ್ಞಾನಿಗಳು ಕಂಡುಹಿಡಿಯುತ್ತಾರೆ. ಆಧುನಿಕ ಕೃಷಿ ಪದ್ದತಿಗಳ ಬಗ್ಗೆಯೂ ಅಧ್ಯಯನ ಮಾಡುತ್ತಾರೆ. ಆದರೆ ಈ ಅಧ್ಯಯನಗಳು ಕೃಷಿ ಭೂಮಿಗೆ ತಲಪುವುದು, ರೈತರಿಗೆ ತಲಪುವುದು ತಡವಾಗುತ್ತದೆ. ರೈತರಿಗೆ ತಲಪಿಸುವುದು ವಿಜ್ಞಾನಿಗಳ ಕೆಲಸವಲ್ಲ. ಹೀಗಾಗಿ ಈಗ ಪ್ರಯೋಗಾಲಯಗಳಲ್ಲಿ ನಡೆಯುವ ಸಂಶೋಧನೆಗಳು ಶೀಘ್ರದಲ್ಲಿ ಕೃಷಿ ಭೂಮಿಗೆ ತಲಪಿಸುವ ವ್ಯವಸ್ಥೆ ಆಗಬೇಕಾಗಿದೆ. ಈ ಬಗ್ಗೆ ದೇಶದ ಕೃಷಿ ಸಚಿವಾಲಯದ ಆಸಕ್ತಿ ವಹಿಸಿದೆ. ಈ ಬಗ್ಗೆ ಕೃಷಿ ಸಚಿವರು ಕಳೆದ ವಾರದ ನಡೆದ ಕಾರ್ಯಕ್ರಮದಲ್ಲಿ ಈ ವಿಷಯ ಫೋಕಸ್ ಮಾಡಿದರು.
ರೈತರಿಗೆ ಅನುಕೂಲವಾಗುವಂತೆ ಪ್ರಯೋಗಾಲಯಗಳಿಂದ ಹೊಲಗಳಿಗೆ ಕೃಷಿ ತಂತ್ರಜ್ಞಾನಗಳನ್ನು ವೇಗವಾಗಿ ವರ್ಗಾಯಿಸುವ ಅಗತ್ಯದ ಬಗ್ಗೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ 63 ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಜಾಗತಿಕ ಸವಾಲುಗಳನ್ನು ಎದುರಿಸಲು ಕೃಷಿ ಯಂತ್ರೋಪಕರಣಗಳು, ಸ್ಮಾರ್ಟ್ ಕೃಷಿ ಮತ್ತು ಮುಂದುವರಿದ ಡಿಜಿಟಲ್ ತಂತ್ರಜ್ಞಾನಗಳ ಅಳವಡಿಕೆ ಕೃಷಿಯಲ್ಲಿ ಅಗತ್ಯ ಇರುವುದರ ಬಗ್ಗೆ ಸಚಿವರು ಗಮನ ಸೆಳೆದರು. ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ ಎಂದು ಅವರು ಹೇಳಿದರು.
ಭಾರತದ ಕೃಷಿ ಬೆಳವಣಿಗೆ ದರವು ಪ್ರಸ್ತುತ ಶೇಕಡಾ 5 ರಷ್ಟಿದೆ, ಸದ್ಯ ರೈತರ ಪ್ರಯತ್ನಗಳಿಂದಾಗಿ ಆಹಾರ ಉತ್ಪಾದನೆಯೂ ಉತ್ತಮವಾಗಿದೆ. ಆದರೆ ಸುಸ್ಥಿರ ಕೃಷಿ, ಹವಾಮಾನ-ನಿರೋಧಕ ಕೃಷಿ, ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಅಗತ್ಯ ಇದೆ ಎಂದು ಸಚಿವರು ಎಚ್ಚರಿಸಿದರು. ಸಂಶೋಧನೆ, ಉದ್ಯಮಶೀಲತೆ ಮತ್ತು ನವೋದ್ಯಮಗಳ ಮೂಲಕ ಕೃಷಿ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು, ಯುವಜನತೆ ಗಮನಹರಿಸಬೇಕು ಎಂದು ಸಚಿವರು ಹೇಳಿದರು.
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490