Advertisement
ಸುದ್ದಿಗಳು

ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು

Share

ದೇಶದಲ್ಲಿ ಹಲವಾರು ಕೃಷಿ ಸಂಶೋಧನೆಗಳು ನಡೆಯುತ್ತವೆ. ವಿನೂತನವಾದ ತಂತ್ರಜ್ಞಾನಗಳನ್ನು ವಿಜ್ಞಾನಿಗಳು ಕಂಡುಹಿಡಿಯುತ್ತಾರೆ. ಆಧುನಿಕ ಕೃಷಿ ಪದ್ದತಿಗಳ ಬಗ್ಗೆಯೂ ಅಧ್ಯಯನ ಮಾಡುತ್ತಾರೆ. ಆದರೆ ಈ ಅಧ್ಯಯನಗಳು ಕೃಷಿ ಭೂಮಿಗೆ ತಲಪುವುದು, ರೈತರಿಗೆ ತಲಪುವುದು ತಡವಾಗುತ್ತದೆ.  ರೈತರಿಗೆ ತಲಪಿಸುವುದು ವಿಜ್ಞಾನಿಗಳ ಕೆಲಸವಲ್ಲ.  ಹೀಗಾಗಿ ಈಗ ಪ್ರಯೋಗಾಲಯಗಳಲ್ಲಿ ನಡೆಯುವ ಸಂಶೋಧನೆಗಳು ಶೀಘ್ರದಲ್ಲಿ ಕೃಷಿ ಭೂಮಿಗೆ ತಲಪಿಸುವ ವ್ಯವಸ್ಥೆ ಆಗಬೇಕಾಗಿದೆ. ಈ ಬಗ್ಗೆ ದೇಶದ ಕೃಷಿ ಸಚಿವಾಲಯದ ಆಸಕ್ತಿ ವಹಿಸಿದೆ. ಈ ಬಗ್ಗೆ ಕೃಷಿ ಸಚಿವರು ಕಳೆದ ವಾರದ ನಡೆದ ಕಾರ್ಯಕ್ರಮದಲ್ಲಿ ಈ ವಿಷಯ ಫೋಕಸ್‌ ಮಾಡಿದರು.

ರೈತರಿಗೆ ಅನುಕೂಲವಾಗುವಂತೆ ಪ್ರಯೋಗಾಲಯಗಳಿಂದ ಹೊಲಗಳಿಗೆ ಕೃಷಿ ತಂತ್ರಜ್ಞಾನಗಳನ್ನು ವೇಗವಾಗಿ ವರ್ಗಾಯಿಸುವ ಅಗತ್ಯದ ಬಗ್ಗೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಹೇಳಿದರು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ 63 ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಜಾಗತಿಕ ಸವಾಲುಗಳನ್ನು ಎದುರಿಸಲು ಕೃಷಿ ಯಂತ್ರೋಪಕರಣಗಳು, ಸ್ಮಾರ್ಟ್ ಕೃಷಿ ಮತ್ತು ಮುಂದುವರಿದ ಡಿಜಿಟಲ್ ತಂತ್ರಜ್ಞಾನಗಳ ಅಳವಡಿಕೆ ಕೃಷಿಯಲ್ಲಿ ಅಗತ್ಯ ಇರುವುದರ ಬಗ್ಗೆ ಸಚಿವರು ಗಮನ ಸೆಳೆದರು. ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ ಎಂದು ಅವರು ಹೇಳಿದರು.

ಭಾರತದ ಕೃಷಿ ಬೆಳವಣಿಗೆ ದರವು ಪ್ರಸ್ತುತ ಶೇಕಡಾ 5 ರಷ್ಟಿದೆ, ಸದ್ಯ ರೈತರ  ಪ್ರಯತ್ನಗಳಿಂದಾಗಿ ಆಹಾರ ಉತ್ಪಾದನೆಯೂ ಉತ್ತಮವಾಗಿದೆ. ಆದರೆ ಸುಸ್ಥಿರ ಕೃಷಿ, ಹವಾಮಾನ-ನಿರೋಧಕ ಕೃಷಿ,  ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಅಗತ್ಯ ಇದೆ ಎಂದು ಸಚಿವರು ಎಚ್ಚರಿಸಿದರು. ಸಂಶೋಧನೆ,  ಉದ್ಯಮಶೀಲತೆ ಮತ್ತು ನವೋದ್ಯಮಗಳ ಮೂಲಕ ಕೃಷಿ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು, ಯುವಜನತೆ ಗಮನಹರಿಸಬೇಕು ಎಂದು ಸಚಿವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

12 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

12 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago