Advertisement
ಸುದ್ದಿಗಳು

ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು

Share

ದೇಶದಲ್ಲಿ ಹಲವಾರು ಕೃಷಿ ಸಂಶೋಧನೆಗಳು ನಡೆಯುತ್ತವೆ. ವಿನೂತನವಾದ ತಂತ್ರಜ್ಞಾನಗಳನ್ನು ವಿಜ್ಞಾನಿಗಳು ಕಂಡುಹಿಡಿಯುತ್ತಾರೆ. ಆಧುನಿಕ ಕೃಷಿ ಪದ್ದತಿಗಳ ಬಗ್ಗೆಯೂ ಅಧ್ಯಯನ ಮಾಡುತ್ತಾರೆ. ಆದರೆ ಈ ಅಧ್ಯಯನಗಳು ಕೃಷಿ ಭೂಮಿಗೆ ತಲಪುವುದು, ರೈತರಿಗೆ ತಲಪುವುದು ತಡವಾಗುತ್ತದೆ.  ರೈತರಿಗೆ ತಲಪಿಸುವುದು ವಿಜ್ಞಾನಿಗಳ ಕೆಲಸವಲ್ಲ.  ಹೀಗಾಗಿ ಈಗ ಪ್ರಯೋಗಾಲಯಗಳಲ್ಲಿ ನಡೆಯುವ ಸಂಶೋಧನೆಗಳು ಶೀಘ್ರದಲ್ಲಿ ಕೃಷಿ ಭೂಮಿಗೆ ತಲಪಿಸುವ ವ್ಯವಸ್ಥೆ ಆಗಬೇಕಾಗಿದೆ. ಈ ಬಗ್ಗೆ ದೇಶದ ಕೃಷಿ ಸಚಿವಾಲಯದ ಆಸಕ್ತಿ ವಹಿಸಿದೆ. ಈ ಬಗ್ಗೆ ಕೃಷಿ ಸಚಿವರು ಕಳೆದ ವಾರದ ನಡೆದ ಕಾರ್ಯಕ್ರಮದಲ್ಲಿ ಈ ವಿಷಯ ಫೋಕಸ್‌ ಮಾಡಿದರು.

ರೈತರಿಗೆ ಅನುಕೂಲವಾಗುವಂತೆ ಪ್ರಯೋಗಾಲಯಗಳಿಂದ ಹೊಲಗಳಿಗೆ ಕೃಷಿ ತಂತ್ರಜ್ಞಾನಗಳನ್ನು ವೇಗವಾಗಿ ವರ್ಗಾಯಿಸುವ ಅಗತ್ಯದ ಬಗ್ಗೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಹೇಳಿದರು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ 63 ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಜಾಗತಿಕ ಸವಾಲುಗಳನ್ನು ಎದುರಿಸಲು ಕೃಷಿ ಯಂತ್ರೋಪಕರಣಗಳು, ಸ್ಮಾರ್ಟ್ ಕೃಷಿ ಮತ್ತು ಮುಂದುವರಿದ ಡಿಜಿಟಲ್ ತಂತ್ರಜ್ಞಾನಗಳ ಅಳವಡಿಕೆ ಕೃಷಿಯಲ್ಲಿ ಅಗತ್ಯ ಇರುವುದರ ಬಗ್ಗೆ ಸಚಿವರು ಗಮನ ಸೆಳೆದರು. ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ ಎಂದು ಅವರು ಹೇಳಿದರು.

ಭಾರತದ ಕೃಷಿ ಬೆಳವಣಿಗೆ ದರವು ಪ್ರಸ್ತುತ ಶೇಕಡಾ 5 ರಷ್ಟಿದೆ, ಸದ್ಯ ರೈತರ  ಪ್ರಯತ್ನಗಳಿಂದಾಗಿ ಆಹಾರ ಉತ್ಪಾದನೆಯೂ ಉತ್ತಮವಾಗಿದೆ. ಆದರೆ ಸುಸ್ಥಿರ ಕೃಷಿ, ಹವಾಮಾನ-ನಿರೋಧಕ ಕೃಷಿ,  ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಅಗತ್ಯ ಇದೆ ಎಂದು ಸಚಿವರು ಎಚ್ಚರಿಸಿದರು. ಸಂಶೋಧನೆ,  ಉದ್ಯಮಶೀಲತೆ ಮತ್ತು ನವೋದ್ಯಮಗಳ ಮೂಲಕ ಕೃಷಿ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು, ಯುವಜನತೆ ಗಮನಹರಿಸಬೇಕು ಎಂದು ಸಚಿವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

7 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

7 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

23 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago