Advertisement
ಸುದ್ದಿಗಳು

ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು

Share

ದೇಶದಲ್ಲಿ ಹಲವಾರು ಕೃಷಿ ಸಂಶೋಧನೆಗಳು ನಡೆಯುತ್ತವೆ. ವಿನೂತನವಾದ ತಂತ್ರಜ್ಞಾನಗಳನ್ನು ವಿಜ್ಞಾನಿಗಳು ಕಂಡುಹಿಡಿಯುತ್ತಾರೆ. ಆಧುನಿಕ ಕೃಷಿ ಪದ್ದತಿಗಳ ಬಗ್ಗೆಯೂ ಅಧ್ಯಯನ ಮಾಡುತ್ತಾರೆ. ಆದರೆ ಈ ಅಧ್ಯಯನಗಳು ಕೃಷಿ ಭೂಮಿಗೆ ತಲಪುವುದು, ರೈತರಿಗೆ ತಲಪುವುದು ತಡವಾಗುತ್ತದೆ.  ರೈತರಿಗೆ ತಲಪಿಸುವುದು ವಿಜ್ಞಾನಿಗಳ ಕೆಲಸವಲ್ಲ.  ಹೀಗಾಗಿ ಈಗ ಪ್ರಯೋಗಾಲಯಗಳಲ್ಲಿ ನಡೆಯುವ ಸಂಶೋಧನೆಗಳು ಶೀಘ್ರದಲ್ಲಿ ಕೃಷಿ ಭೂಮಿಗೆ ತಲಪಿಸುವ ವ್ಯವಸ್ಥೆ ಆಗಬೇಕಾಗಿದೆ. ಈ ಬಗ್ಗೆ ದೇಶದ ಕೃಷಿ ಸಚಿವಾಲಯದ ಆಸಕ್ತಿ ವಹಿಸಿದೆ. ಈ ಬಗ್ಗೆ ಕೃಷಿ ಸಚಿವರು ಕಳೆದ ವಾರದ ನಡೆದ ಕಾರ್ಯಕ್ರಮದಲ್ಲಿ ಈ ವಿಷಯ ಫೋಕಸ್‌ ಮಾಡಿದರು.

Advertisement

ರೈತರಿಗೆ ಅನುಕೂಲವಾಗುವಂತೆ ಪ್ರಯೋಗಾಲಯಗಳಿಂದ ಹೊಲಗಳಿಗೆ ಕೃಷಿ ತಂತ್ರಜ್ಞಾನಗಳನ್ನು ವೇಗವಾಗಿ ವರ್ಗಾಯಿಸುವ ಅಗತ್ಯದ ಬಗ್ಗೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಹೇಳಿದರು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ 63 ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಜಾಗತಿಕ ಸವಾಲುಗಳನ್ನು ಎದುರಿಸಲು ಕೃಷಿ ಯಂತ್ರೋಪಕರಣಗಳು, ಸ್ಮಾರ್ಟ್ ಕೃಷಿ ಮತ್ತು ಮುಂದುವರಿದ ಡಿಜಿಟಲ್ ತಂತ್ರಜ್ಞಾನಗಳ ಅಳವಡಿಕೆ ಕೃಷಿಯಲ್ಲಿ ಅಗತ್ಯ ಇರುವುದರ ಬಗ್ಗೆ ಸಚಿವರು ಗಮನ ಸೆಳೆದರು. ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ ಎಂದು ಅವರು ಹೇಳಿದರು.

ಭಾರತದ ಕೃಷಿ ಬೆಳವಣಿಗೆ ದರವು ಪ್ರಸ್ತುತ ಶೇಕಡಾ 5 ರಷ್ಟಿದೆ, ಸದ್ಯ ರೈತರ  ಪ್ರಯತ್ನಗಳಿಂದಾಗಿ ಆಹಾರ ಉತ್ಪಾದನೆಯೂ ಉತ್ತಮವಾಗಿದೆ. ಆದರೆ ಸುಸ್ಥಿರ ಕೃಷಿ, ಹವಾಮಾನ-ನಿರೋಧಕ ಕೃಷಿ,  ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಅಗತ್ಯ ಇದೆ ಎಂದು ಸಚಿವರು ಎಚ್ಚರಿಸಿದರು. ಸಂಶೋಧನೆ,  ಉದ್ಯಮಶೀಲತೆ ಮತ್ತು ನವೋದ್ಯಮಗಳ ಮೂಲಕ ಕೃಷಿ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು, ಯುವಜನತೆ ಗಮನಹರಿಸಬೇಕು ಎಂದು ಸಚಿವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

8 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

19 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

19 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago