ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.
ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.
ಕರಾಡು ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ. ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…