ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.
ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.
ಕರಾಡು ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ. ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…