Advertisement
ರಾಷ್ಟ್ರೀಯ

ಕಾಯಿದೆ ಬದಲಾವಣೆಗೆ ವಾಣಿಜ್ಯ ಸಚಿವಾಲಯ ಚಿಂತನೆ | ರಬ್ಬರ್ ಸೇರಿದಂತೆ ವಾಣಿಜ್ಯ ಬೆಳೆ ಉತ್ತೇಜನಕ್ಕೆ ಕ್ರಮ |

Share

ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್‌ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ  ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.

Advertisement
Advertisement

ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ  ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.

ಕರಾಡು  ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ.  ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ  ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್‌ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

4 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

5 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago