ರಾಷ್ಟ್ರೀಯ

ಕಾಯಿದೆ ಬದಲಾವಣೆಗೆ ವಾಣಿಜ್ಯ ಸಚಿವಾಲಯ ಚಿಂತನೆ | ರಬ್ಬರ್ ಸೇರಿದಂತೆ ವಾಣಿಜ್ಯ ಬೆಳೆ ಉತ್ತೇಜನಕ್ಕೆ ಕ್ರಮ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್‌ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ  ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.

Advertisement
Advertisement

ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ  ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.

ಕರಾಡು  ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ.  ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ  ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್‌ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

6 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

6 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

7 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

7 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

7 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

7 hours ago