Advertisement
ರಾಷ್ಟ್ರೀಯ

ಕಾಯಿದೆ ಬದಲಾವಣೆಗೆ ವಾಣಿಜ್ಯ ಸಚಿವಾಲಯ ಚಿಂತನೆ | ರಬ್ಬರ್ ಸೇರಿದಂತೆ ವಾಣಿಜ್ಯ ಬೆಳೆ ಉತ್ತೇಜನಕ್ಕೆ ಕ್ರಮ |

Share

ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್‌ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ  ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.

ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ  ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.

ಕರಾಡು  ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ.  ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ  ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್‌ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

4 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago