Advertisement
ರಾಷ್ಟ್ರೀಯ

ಕಾಯಿದೆ ಬದಲಾವಣೆಗೆ ವಾಣಿಜ್ಯ ಸಚಿವಾಲಯ ಚಿಂತನೆ | ರಬ್ಬರ್ ಸೇರಿದಂತೆ ವಾಣಿಜ್ಯ ಬೆಳೆ ಉತ್ತೇಜನಕ್ಕೆ ಕ್ರಮ |

Share

ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್‌ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ  ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.

ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ  ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.

ಕರಾಡು  ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ.  ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ  ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್‌ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

6 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago