Advertisement
ರಾಷ್ಟ್ರೀಯ

ಕಾಯಿದೆ ಬದಲಾವಣೆಗೆ ವಾಣಿಜ್ಯ ಸಚಿವಾಲಯ ಚಿಂತನೆ | ರಬ್ಬರ್ ಸೇರಿದಂತೆ ವಾಣಿಜ್ಯ ಬೆಳೆ ಉತ್ತೇಜನಕ್ಕೆ ಕ್ರಮ |

Share

ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್‌ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ  ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.

ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ  ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.

ಕರಾಡು  ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ.  ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ  ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್‌ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 hour ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

8 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

16 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

17 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago