ದೇಶದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಚಳಿಯೂ ಉತ್ತಮವಾಗಿರುವುದರಿಂದ ಹಿಂಗಾರು ಬೆಳೆ ಬೆಳೆಯುವ ರಾಜ್ಯಗಳಲ್ಲಿ ಉತ್ತಮ ಬೆಳೆ ನಿರೀಕ್ಷೆ ಇದೆ ಎಂದು ಕೃಷಿ ಸಚಿವಾಲಯವು ಶುಕ್ರವಾರ ತಿಳಿಸಿದೆ.
ಸಾಕಷ್ಟು ಉತ್ತಮ ಚಳಿಗಾಲ ಹಾಗೂ ಈ ಬಾರಿ ಮಳೆಯೂ ನಿರೀಕ್ಷಿತವಾಗಿ ಆಗಿದೆ. ಹೀಗಾಗಿ ಅತ್ಯಂತ ಉತ್ತಮ ನೀರಿನ ಜಲಾಶಯವೂ ಉಂಟಾಗಿದೆ. ಹಿಂಗಾರು ಬೆಳೆಗೆ ಮಣ್ಣಿನ ತೇವಾಂಶದ ಸ್ಥಿತಿಯ ಲಭ್ಯತೆಯು ಮುಂಬರುವ ಬೆಳೆಗಳಾದ ಬೇಳೆಕಾಳುಗಳು, ಜೋಳ, ಹಣ್ಣುಗಳು ಮತ್ತು ತರಕಾರಿಗಳಿಗೆ ಉತ್ತಮ ನಿರೀಕ್ಷೆಯನ್ನು ಸೂಚಿಸುತ್ತದೆ ಎಂದು ಸಚಿವಾಲಯ ಹೇಳಿದೆ.
ಶುಕ್ರವಾರ ಕೃಷಿ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಎಲ್ಲಾ ರಬಿ ಅಥವಾ ಹಿಂಗಾರು ಬೆಳೆಗಳ ಒಟ್ಟು ವಿಸ್ತೀರ್ಣವು 2021-22 ಋತುವಿನಲ್ಲಿ 672 ಲಕ್ಷ ಹೆಕ್ಟೇರ್ಗೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗೋಧಿ ಮತ್ತು ಇತರ ಧಾನ್ಯಗಳ ಬಿತ್ತೆಯು ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಕೋವಿಡ್ನ ಮೂರನೇ ಅಲೆಯು ಚಳಿಗಾಲದ ಬೆಳೆಗಳ ಬಿತ್ತೆನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಚಿವಾಲಯ ಹೇಳಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…