ದೇಶದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಚಳಿಯೂ ಉತ್ತಮವಾಗಿರುವುದರಿಂದ ಹಿಂಗಾರು ಬೆಳೆ ಬೆಳೆಯುವ ರಾಜ್ಯಗಳಲ್ಲಿ ಉತ್ತಮ ಬೆಳೆ ನಿರೀಕ್ಷೆ ಇದೆ ಎಂದು ಕೃಷಿ ಸಚಿವಾಲಯವು ಶುಕ್ರವಾರ ತಿಳಿಸಿದೆ.
ಸಾಕಷ್ಟು ಉತ್ತಮ ಚಳಿಗಾಲ ಹಾಗೂ ಈ ಬಾರಿ ಮಳೆಯೂ ನಿರೀಕ್ಷಿತವಾಗಿ ಆಗಿದೆ. ಹೀಗಾಗಿ ಅತ್ಯಂತ ಉತ್ತಮ ನೀರಿನ ಜಲಾಶಯವೂ ಉಂಟಾಗಿದೆ. ಹಿಂಗಾರು ಬೆಳೆಗೆ ಮಣ್ಣಿನ ತೇವಾಂಶದ ಸ್ಥಿತಿಯ ಲಭ್ಯತೆಯು ಮುಂಬರುವ ಬೆಳೆಗಳಾದ ಬೇಳೆಕಾಳುಗಳು, ಜೋಳ, ಹಣ್ಣುಗಳು ಮತ್ತು ತರಕಾರಿಗಳಿಗೆ ಉತ್ತಮ ನಿರೀಕ್ಷೆಯನ್ನು ಸೂಚಿಸುತ್ತದೆ ಎಂದು ಸಚಿವಾಲಯ ಹೇಳಿದೆ.
ಶುಕ್ರವಾರ ಕೃಷಿ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಎಲ್ಲಾ ರಬಿ ಅಥವಾ ಹಿಂಗಾರು ಬೆಳೆಗಳ ಒಟ್ಟು ವಿಸ್ತೀರ್ಣವು 2021-22 ಋತುವಿನಲ್ಲಿ 672 ಲಕ್ಷ ಹೆಕ್ಟೇರ್ಗೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗೋಧಿ ಮತ್ತು ಇತರ ಧಾನ್ಯಗಳ ಬಿತ್ತೆಯು ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಕೋವಿಡ್ನ ಮೂರನೇ ಅಲೆಯು ಚಳಿಗಾಲದ ಬೆಳೆಗಳ ಬಿತ್ತೆನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಚಿವಾಲಯ ಹೇಳಿದೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…