ದೇಶದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಚಳಿಯೂ ಉತ್ತಮವಾಗಿರುವುದರಿಂದ ಹಿಂಗಾರು ಬೆಳೆ ಬೆಳೆಯುವ ರಾಜ್ಯಗಳಲ್ಲಿ ಉತ್ತಮ ಬೆಳೆ ನಿರೀಕ್ಷೆ ಇದೆ ಎಂದು ಕೃಷಿ ಸಚಿವಾಲಯವು ಶುಕ್ರವಾರ ತಿಳಿಸಿದೆ.
ಸಾಕಷ್ಟು ಉತ್ತಮ ಚಳಿಗಾಲ ಹಾಗೂ ಈ ಬಾರಿ ಮಳೆಯೂ ನಿರೀಕ್ಷಿತವಾಗಿ ಆಗಿದೆ. ಹೀಗಾಗಿ ಅತ್ಯಂತ ಉತ್ತಮ ನೀರಿನ ಜಲಾಶಯವೂ ಉಂಟಾಗಿದೆ. ಹಿಂಗಾರು ಬೆಳೆಗೆ ಮಣ್ಣಿನ ತೇವಾಂಶದ ಸ್ಥಿತಿಯ ಲಭ್ಯತೆಯು ಮುಂಬರುವ ಬೆಳೆಗಳಾದ ಬೇಳೆಕಾಳುಗಳು, ಜೋಳ, ಹಣ್ಣುಗಳು ಮತ್ತು ತರಕಾರಿಗಳಿಗೆ ಉತ್ತಮ ನಿರೀಕ್ಷೆಯನ್ನು ಸೂಚಿಸುತ್ತದೆ ಎಂದು ಸಚಿವಾಲಯ ಹೇಳಿದೆ.
ಶುಕ್ರವಾರ ಕೃಷಿ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಎಲ್ಲಾ ರಬಿ ಅಥವಾ ಹಿಂಗಾರು ಬೆಳೆಗಳ ಒಟ್ಟು ವಿಸ್ತೀರ್ಣವು 2021-22 ಋತುವಿನಲ್ಲಿ 672 ಲಕ್ಷ ಹೆಕ್ಟೇರ್ಗೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗೋಧಿ ಮತ್ತು ಇತರ ಧಾನ್ಯಗಳ ಬಿತ್ತೆಯು ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಕೋವಿಡ್ನ ಮೂರನೇ ಅಲೆಯು ಚಳಿಗಾಲದ ಬೆಳೆಗಳ ಬಿತ್ತೆನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಚಿವಾಲಯ ಹೇಳಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…