Advertisement
MIRROR FOCUS

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

Share

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ ಅಧಿಕೃತ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಈ ಬಾರಿ ದೇಶದಾದ್ಯಂತ ರಬಿ ಬಿತ್ತನೆ ಹೊಸ ದಾಖಲೆ ಮಟ್ಟ ತಲುಪಿದೆ.  ಈ ವರ್ಷ ರಬಿ ಬೆಳೆಗಳ ಒಟ್ಟು ವಿಸ್ತೀರ್ಣ 660.48 ಲಕ್ಷ ಹೆಕ್ಟೇರ್ ಆಗಿದ್ದು, ಇದು ಕಳೆದ ವರ್ಷದ ಬಿತ್ತನೆಗಿಂತ 18.24 ಲಕ್ಷ ಹೆಕ್ಟೇರ್‌ಗಳಷ್ಟು ಹೆಚ್ಚಳವಾಗಿದೆ. ಈ ಬಿತ್ತನೆ ಹೆಚ್ಚಳವು ರೈತರ ಶ್ರಮ, ಸಮಯಪಾಲನೆ ಹಾಗೂ ಅನುಕೂಲಕರ ಹವಾಮಾನದ ಪರಿಣಾಮವಾಗಿದೆ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.

ಪ್ರಮುಖ ಬೆಳೆಗಳಲ್ಲಿ ಗಣನೀಯ ಪ್ರಗತಿಯಾಗಿದ್ದು ಗೋಧಿ ಬಿತ್ತನೆ ಹೆಚ್ಚಳ ಕಂಡಿದೆ.  ರಬಿ ಹಂಗಾಮಿನ ಪ್ರಮುಖ ಆಹಾರ ಧಾನ್ಯವಾದ ಗೋಧಿಯ ಬಿತ್ತನೆ ಈ ಬಾರಿ 334.17 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಕಳೆದ ವರ್ಷಕ್ಕಿಂತ 6.13 ಲಕ್ಷ ಹೆಕ್ಟೇರ್ ಹೆಚ್ಚಳ ಕಂಡುಬಂದಿದೆ. ಇದು ದೇಶದ ಆಹಾರ ಭದ್ರತೆ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ.

ಭತ್ತದ ವಿಸ್ತೀರ್ಣದಲ್ಲಿಯೂ ಏರಿಕೆಯಾಗಿದ್ದು, ಭತ್ತದ ಬಿತ್ತನೆಯ ವಿಸ್ತೀರ್ಣ 31.03 ಲಕ್ಷ ಹೆಕ್ಟೇರ್ ಆಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 1.80 ಲಕ್ಷ ಹೆಕ್ಟೇರ್ ಹೆಚ್ಚಾಗಿದೆ.

ದ್ವಿದಳ ಧಾನ್ಯಗಳಲ್ಲಿ ಉತ್ತೇಜನ ಕಂಡುಬಂದಿದ್ದು, ಕಡಲೆ ಬೆಳೆಯ ಬಿತ್ತನೆ ಈ ಬಾರಿ ವಿಶೇಷವಾಗಿ ಹೆಚ್ಚಾಗಿದ್ದು, 4.66 ಲಕ್ಷ ಹೆಕ್ಟೇರ್ ಹೆಚ್ಚಳದೊಂದಿಗೆ ಒಟ್ಟು ವಿಸ್ತೀರ್ಣ 95.88 ಲಕ್ಷ ಹೆಕ್ಟೇರ್‌ಗೆ ತಲುಪಿದೆ. ಆದರೆ  ಉದ್ದು ಬೆಳೆಯ ವಿಸ್ತೀರ್ಣದಲ್ಲಿ ಸ್ವಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.

ಧಾನ್ಯ ಮತ್ತು ಎಣ್ಣೆಕಾಳು ಬೆಳೆಗಳ ಸ್ಥಿತಿಯಲ್ಲಿ ಸ್ಥಿರತೆ ಕಂಡುಬಂದಿದ್ದು,ಜೋಳದ ವಿಸ್ತೀರ್ಣವು ಈ ಬಾರಿ 2.905 ಮಿಲಿಯನ್ ಹೆಕ್ಟೇರ್‌ಗಳಲ್ಲೇ ಸ್ಥಿರವಾಗಿದೆ. ಇನ್ನು ಬಾರ್ಲಿ  ಬೆಳೆಗಳ ಬಿತ್ತನೆಯಲ್ಲೂ ಏರಿಕೆ ಕಂಡುಬಂದಿದೆ. ಸೂರ್ಯಕಾಂತಿ ಸೇರಿದಂತೆ ವಿವಿಧ ಎಣ್ಣೆಕಾಳು ಬೆಳೆಗಳ ನಾಟಿಯೂ ಈ ಬಾರಿ ಹೆಚ್ಚಾಗಿರುವುದು ಕೃಷಿ ಸಚಿವಾಲಯದ ವರದಿಯಲ್ಲಿ ಉಲ್ಲೇಖಗೊಂಡಿದೆ.

ಈ ವರ್ಷ ರೈತರು ಸಮಯಕ್ಕೆ ಸರಿಯಾಗಿ ಬಿತ್ತನೆ ಕಾರ್ಯ ಆರಂಭಿಸಿದ್ದು, ಕೃಷಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಬೆಂಬಲ ನೀತಿಗಳ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಈ ಬಿತ್ತನೆ ಋತುವು ಮುಂದಿನ ದಿನಗಳಲ್ಲಿ ಉತ್ತಮ ಇಳುವರಿ, ರೈತರ ಆದಾಯ ಹೆಚ್ಚಳ, ದೇಶದ ಆಹಾರ ಭದ್ರತೆಗೆ ಬಲ ಎಂಬ ಸಕಾರಾತ್ಮಕ ನಿರೀಕ್ಷೆ ಮೂಡಿಸಿದೆ. ಒಟ್ಟು ಅಂಕಿಅಂಶಗಳು ಈ ಋತುವಿನಲ್ಲಿ ರೈತರು ತಮ್ಮ ಹೊಲಗಳಲ್ಲಿ ಶ್ರಮಪಟ್ಟು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ಈ ರಬಿ ಹಂಗಾಮು ಕೃಷಿ ವಲಯಕ್ಕೆ ಭರವಸೆ ಮತ್ತು ಹೊಸ ಅವಕಾಶದ ಕಾಲವೆಂದು ತೋರಿಸುತ್ತಿದೆ ಎಂದು ಸಚಿವಾಲಯವು ಹೇಳಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

7 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

12 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

24 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago