ವಯನಾಡು ದುರಂತ | ಅವಶೇಷಗಳ ಅಡಿ ಉಸಿರಾಟದ ಸಂಕೇತ | ಸೇನೆಯ ಅತ್ಯಾಧುನಿಕ ರಾಡಾರ್‌ನಲ್ಲಿ ಸಿಗ್ನಲ್‌ |

August 2, 2024
8:02 PM

ಕೇರಳದ ವಯನಾಡು ಜಿಲ್ಲೆಯಲ್ಲಿ  ಭೂಕುಸಿತಕ್ಕೆ ಒಳಗಾದ  ಪ್ರದೇಶದಲ್ಲಿ ಭಾರತೀಯ ಸೇನೆಯು ಅತ್ಯಾಧುನಿಕ ರಾಡಾರ್ ವ್ಯವಸ್ಥೆಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭ  ರಕ್ಷಣಾ ಸಿಬಂದಿಗಳು ಉಸಿರಾಟವನ್ನು ಸೂಚಿಸುವ ಸಂಕೇತವನ್ನು ಪತ್ತೆಹಚ್ಚಿದ್ದಾರೆ, ಆದರೆ ಇದು ಮನುಷ್ಯ ಅಥವಾ ಪ್ರಾಣಿಯದ್ದಾಗಿರಬಹುದು ಎಂದು ಹೇಳಿದ್ದಾರೆ.

ಭೂಕುಸಿತಕ್ಕೆ ತೀವ್ರ ಹಾನಿಗೊಳಗಾದ ಮುಂಡಕ್ಕೈ ಗ್ರಾಮದಲ್ಲಿ ಈ ಹಿಂದೆ ಮನೆ ಇದ್ದ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾಗ ರಾಡಾರ್‌ನಲ್ಲಿ ‘ಬ್ಲೂ ಸಿಗ್ನಲ್’ ಬಂದಿತ್ತು ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದ್ದಾರೆ. “ಉಸಿರಾಟದ ಸ್ಥಿರ ಸಂಕೇತವಿದೆ” ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದರು.ಕಟ್ಟಡದ ಅವಶೇಷಗಳು ಮಣ್ಣಿನ ಕೆಳಭಾಗದಲ್ಲಿ ಸುಮಾರು ಎರಡು-ಮೂರು ಮೀಟರ್ ಕೆಳಭಾಗದಲ್ಲಿ ಇದ್ದು , ಉಸಿರಾಟದ ಸಂಕೇತವು ಮನುಷ್ಯ ಅಥವಾ ಪ್ರಾಣಿಯದ್ದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.

ಸ್ಥಳೀಯ ನಿವಾಸಿಗಳ ಪ್ರಕಾರ, ಮನೆಯ ಅಡುಗೆ ಕೋಣೆ ಮತ್ತು ಸ್ಟೋರ್ ರೂಂ ಇರುವ ಪ್ರದೇಶದಲ್ಲಿ ಸಿಗ್ನಲ್ ಪತ್ತೆಯಾಗಿದೆ. ಈ  ಸಿಗ್ನಲ್ ಆಧರಿಸಿ, ರಕ್ಷಕರು ಸ್ಥಳಕ್ಕೆ ಅಗೆಯಲು ಪ್ರಾರಂಭಿಸಿದ್ದಾರೆ.

Source : PTI

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror