ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತಕ್ಕೆ ಒಳಗಾದ ಪ್ರದೇಶದಲ್ಲಿ ಭಾರತೀಯ ಸೇನೆಯು ಅತ್ಯಾಧುನಿಕ ರಾಡಾರ್ ವ್ಯವಸ್ಥೆಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭ ರಕ್ಷಣಾ ಸಿಬಂದಿಗಳು ಉಸಿರಾಟವನ್ನು ಸೂಚಿಸುವ ಸಂಕೇತವನ್ನು ಪತ್ತೆಹಚ್ಚಿದ್ದಾರೆ, ಆದರೆ ಇದು ಮನುಷ್ಯ ಅಥವಾ ಪ್ರಾಣಿಯದ್ದಾಗಿರಬಹುದು ಎಂದು ಹೇಳಿದ್ದಾರೆ.
ಭೂಕುಸಿತಕ್ಕೆ ತೀವ್ರ ಹಾನಿಗೊಳಗಾದ ಮುಂಡಕ್ಕೈ ಗ್ರಾಮದಲ್ಲಿ ಈ ಹಿಂದೆ ಮನೆ ಇದ್ದ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾಗ ರಾಡಾರ್ನಲ್ಲಿ ‘ಬ್ಲೂ ಸಿಗ್ನಲ್’ ಬಂದಿತ್ತು ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದ್ದಾರೆ. “ಉಸಿರಾಟದ ಸ್ಥಿರ ಸಂಕೇತವಿದೆ” ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದರು.ಕಟ್ಟಡದ ಅವಶೇಷಗಳು ಮಣ್ಣಿನ ಕೆಳಭಾಗದಲ್ಲಿ ಸುಮಾರು ಎರಡು-ಮೂರು ಮೀಟರ್ ಕೆಳಭಾಗದಲ್ಲಿ ಇದ್ದು , ಉಸಿರಾಟದ ಸಂಕೇತವು ಮನುಷ್ಯ ಅಥವಾ ಪ್ರಾಣಿಯದ್ದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.
ಸ್ಥಳೀಯ ನಿವಾಸಿಗಳ ಪ್ರಕಾರ, ಮನೆಯ ಅಡುಗೆ ಕೋಣೆ ಮತ್ತು ಸ್ಟೋರ್ ರೂಂ ಇರುವ ಪ್ರದೇಶದಲ್ಲಿ ಸಿಗ್ನಲ್ ಪತ್ತೆಯಾಗಿದೆ. ಈ ಸಿಗ್ನಲ್ ಆಧರಿಸಿ, ರಕ್ಷಕರು ಸ್ಥಳಕ್ಕೆ ಅಗೆಯಲು ಪ್ರಾರಂಭಿಸಿದ್ದಾರೆ.
Source : PTI
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…