ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತಕ್ಕೆ ಒಳಗಾದ ಪ್ರದೇಶದಲ್ಲಿ ಭಾರತೀಯ ಸೇನೆಯು ಅತ್ಯಾಧುನಿಕ ರಾಡಾರ್ ವ್ಯವಸ್ಥೆಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭ ರಕ್ಷಣಾ ಸಿಬಂದಿಗಳು ಉಸಿರಾಟವನ್ನು ಸೂಚಿಸುವ ಸಂಕೇತವನ್ನು ಪತ್ತೆಹಚ್ಚಿದ್ದಾರೆ, ಆದರೆ ಇದು ಮನುಷ್ಯ ಅಥವಾ ಪ್ರಾಣಿಯದ್ದಾಗಿರಬಹುದು ಎಂದು ಹೇಳಿದ್ದಾರೆ.
ಭೂಕುಸಿತಕ್ಕೆ ತೀವ್ರ ಹಾನಿಗೊಳಗಾದ ಮುಂಡಕ್ಕೈ ಗ್ರಾಮದಲ್ಲಿ ಈ ಹಿಂದೆ ಮನೆ ಇದ್ದ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾಗ ರಾಡಾರ್ನಲ್ಲಿ ‘ಬ್ಲೂ ಸಿಗ್ನಲ್’ ಬಂದಿತ್ತು ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದ್ದಾರೆ. “ಉಸಿರಾಟದ ಸ್ಥಿರ ಸಂಕೇತವಿದೆ” ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದರು.ಕಟ್ಟಡದ ಅವಶೇಷಗಳು ಮಣ್ಣಿನ ಕೆಳಭಾಗದಲ್ಲಿ ಸುಮಾರು ಎರಡು-ಮೂರು ಮೀಟರ್ ಕೆಳಭಾಗದಲ್ಲಿ ಇದ್ದು , ಉಸಿರಾಟದ ಸಂಕೇತವು ಮನುಷ್ಯ ಅಥವಾ ಪ್ರಾಣಿಯದ್ದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.
ಸ್ಥಳೀಯ ನಿವಾಸಿಗಳ ಪ್ರಕಾರ, ಮನೆಯ ಅಡುಗೆ ಕೋಣೆ ಮತ್ತು ಸ್ಟೋರ್ ರೂಂ ಇರುವ ಪ್ರದೇಶದಲ್ಲಿ ಸಿಗ್ನಲ್ ಪತ್ತೆಯಾಗಿದೆ. ಈ ಸಿಗ್ನಲ್ ಆಧರಿಸಿ, ರಕ್ಷಕರು ಸ್ಥಳಕ್ಕೆ ಅಗೆಯಲು ಪ್ರಾರಂಭಿಸಿದ್ದಾರೆ.
Source : PTI
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…