ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತಕ್ಕೆ ಒಳಗಾದ ಪ್ರದೇಶದಲ್ಲಿ ಭಾರತೀಯ ಸೇನೆಯು ಅತ್ಯಾಧುನಿಕ ರಾಡಾರ್ ವ್ಯವಸ್ಥೆಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭ ರಕ್ಷಣಾ ಸಿಬಂದಿಗಳು ಉಸಿರಾಟವನ್ನು ಸೂಚಿಸುವ ಸಂಕೇತವನ್ನು ಪತ್ತೆಹಚ್ಚಿದ್ದಾರೆ, ಆದರೆ ಇದು ಮನುಷ್ಯ ಅಥವಾ ಪ್ರಾಣಿಯದ್ದಾಗಿರಬಹುದು ಎಂದು ಹೇಳಿದ್ದಾರೆ.
ಭೂಕುಸಿತಕ್ಕೆ ತೀವ್ರ ಹಾನಿಗೊಳಗಾದ ಮುಂಡಕ್ಕೈ ಗ್ರಾಮದಲ್ಲಿ ಈ ಹಿಂದೆ ಮನೆ ಇದ್ದ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾಗ ರಾಡಾರ್ನಲ್ಲಿ ‘ಬ್ಲೂ ಸಿಗ್ನಲ್’ ಬಂದಿತ್ತು ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದ್ದಾರೆ. “ಉಸಿರಾಟದ ಸ್ಥಿರ ಸಂಕೇತವಿದೆ” ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದರು.ಕಟ್ಟಡದ ಅವಶೇಷಗಳು ಮಣ್ಣಿನ ಕೆಳಭಾಗದಲ್ಲಿ ಸುಮಾರು ಎರಡು-ಮೂರು ಮೀಟರ್ ಕೆಳಭಾಗದಲ್ಲಿ ಇದ್ದು , ಉಸಿರಾಟದ ಸಂಕೇತವು ಮನುಷ್ಯ ಅಥವಾ ಪ್ರಾಣಿಯದ್ದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.
ಸ್ಥಳೀಯ ನಿವಾಸಿಗಳ ಪ್ರಕಾರ, ಮನೆಯ ಅಡುಗೆ ಕೋಣೆ ಮತ್ತು ಸ್ಟೋರ್ ರೂಂ ಇರುವ ಪ್ರದೇಶದಲ್ಲಿ ಸಿಗ್ನಲ್ ಪತ್ತೆಯಾಗಿದೆ. ಈ ಸಿಗ್ನಲ್ ಆಧರಿಸಿ, ರಕ್ಷಕರು ಸ್ಥಳಕ್ಕೆ ಅಗೆಯಲು ಪ್ರಾರಂಭಿಸಿದ್ದಾರೆ.
Source : PTI
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…