ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತಕ್ಕೆ ಒಳಗಾದ ಪ್ರದೇಶದಲ್ಲಿ ಭಾರತೀಯ ಸೇನೆಯು ಅತ್ಯಾಧುನಿಕ ರಾಡಾರ್ ವ್ಯವಸ್ಥೆಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭ ರಕ್ಷಣಾ ಸಿಬಂದಿಗಳು ಉಸಿರಾಟವನ್ನು ಸೂಚಿಸುವ ಸಂಕೇತವನ್ನು ಪತ್ತೆಹಚ್ಚಿದ್ದಾರೆ, ಆದರೆ ಇದು ಮನುಷ್ಯ ಅಥವಾ ಪ್ರಾಣಿಯದ್ದಾಗಿರಬಹುದು ಎಂದು ಹೇಳಿದ್ದಾರೆ.
ಭೂಕುಸಿತಕ್ಕೆ ತೀವ್ರ ಹಾನಿಗೊಳಗಾದ ಮುಂಡಕ್ಕೈ ಗ್ರಾಮದಲ್ಲಿ ಈ ಹಿಂದೆ ಮನೆ ಇದ್ದ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾಗ ರಾಡಾರ್ನಲ್ಲಿ ‘ಬ್ಲೂ ಸಿಗ್ನಲ್’ ಬಂದಿತ್ತು ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದ್ದಾರೆ. “ಉಸಿರಾಟದ ಸ್ಥಿರ ಸಂಕೇತವಿದೆ” ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದರು.ಕಟ್ಟಡದ ಅವಶೇಷಗಳು ಮಣ್ಣಿನ ಕೆಳಭಾಗದಲ್ಲಿ ಸುಮಾರು ಎರಡು-ಮೂರು ಮೀಟರ್ ಕೆಳಭಾಗದಲ್ಲಿ ಇದ್ದು , ಉಸಿರಾಟದ ಸಂಕೇತವು ಮನುಷ್ಯ ಅಥವಾ ಪ್ರಾಣಿಯದ್ದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.
ಸ್ಥಳೀಯ ನಿವಾಸಿಗಳ ಪ್ರಕಾರ, ಮನೆಯ ಅಡುಗೆ ಕೋಣೆ ಮತ್ತು ಸ್ಟೋರ್ ರೂಂ ಇರುವ ಪ್ರದೇಶದಲ್ಲಿ ಸಿಗ್ನಲ್ ಪತ್ತೆಯಾಗಿದೆ. ಈ ಸಿಗ್ನಲ್ ಆಧರಿಸಿ, ರಕ್ಷಕರು ಸ್ಥಳಕ್ಕೆ ಅಗೆಯಲು ಪ್ರಾರಂಭಿಸಿದ್ದಾರೆ.
Source : PTI
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…