ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತಕ್ಕೆ ಒಳಗಾದ ಪ್ರದೇಶದಲ್ಲಿ ಭಾರತೀಯ ಸೇನೆಯು ಅತ್ಯಾಧುನಿಕ ರಾಡಾರ್ ವ್ಯವಸ್ಥೆಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭ ರಕ್ಷಣಾ ಸಿಬಂದಿಗಳು ಉಸಿರಾಟವನ್ನು ಸೂಚಿಸುವ ಸಂಕೇತವನ್ನು ಪತ್ತೆಹಚ್ಚಿದ್ದಾರೆ, ಆದರೆ ಇದು ಮನುಷ್ಯ ಅಥವಾ ಪ್ರಾಣಿಯದ್ದಾಗಿರಬಹುದು ಎಂದು ಹೇಳಿದ್ದಾರೆ.
ಭೂಕುಸಿತಕ್ಕೆ ತೀವ್ರ ಹಾನಿಗೊಳಗಾದ ಮುಂಡಕ್ಕೈ ಗ್ರಾಮದಲ್ಲಿ ಈ ಹಿಂದೆ ಮನೆ ಇದ್ದ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾಗ ರಾಡಾರ್ನಲ್ಲಿ ‘ಬ್ಲೂ ಸಿಗ್ನಲ್’ ಬಂದಿತ್ತು ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದ್ದಾರೆ. “ಉಸಿರಾಟದ ಸ್ಥಿರ ಸಂಕೇತವಿದೆ” ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದರು.ಕಟ್ಟಡದ ಅವಶೇಷಗಳು ಮಣ್ಣಿನ ಕೆಳಭಾಗದಲ್ಲಿ ಸುಮಾರು ಎರಡು-ಮೂರು ಮೀಟರ್ ಕೆಳಭಾಗದಲ್ಲಿ ಇದ್ದು , ಉಸಿರಾಟದ ಸಂಕೇತವು ಮನುಷ್ಯ ಅಥವಾ ಪ್ರಾಣಿಯದ್ದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.
ಸ್ಥಳೀಯ ನಿವಾಸಿಗಳ ಪ್ರಕಾರ, ಮನೆಯ ಅಡುಗೆ ಕೋಣೆ ಮತ್ತು ಸ್ಟೋರ್ ರೂಂ ಇರುವ ಪ್ರದೇಶದಲ್ಲಿ ಸಿಗ್ನಲ್ ಪತ್ತೆಯಾಗಿದೆ. ಈ ಸಿಗ್ನಲ್ ಆಧರಿಸಿ, ರಕ್ಷಕರು ಸ್ಥಳಕ್ಕೆ ಅಗೆಯಲು ಪ್ರಾರಂಭಿಸಿದ್ದಾರೆ.
Source : PTI
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…