Advertisement
ಪ್ರಮುಖ

ವಯನಾಡು ದುರಂತ | ಅವಶೇಷಗಳ ಅಡಿ ಉಸಿರಾಟದ ಸಂಕೇತ | ಸೇನೆಯ ಅತ್ಯಾಧುನಿಕ ರಾಡಾರ್‌ನಲ್ಲಿ ಸಿಗ್ನಲ್‌ |

Share

ಕೇರಳದ ವಯನಾಡು ಜಿಲ್ಲೆಯಲ್ಲಿ  ಭೂಕುಸಿತಕ್ಕೆ ಒಳಗಾದ  ಪ್ರದೇಶದಲ್ಲಿ ಭಾರತೀಯ ಸೇನೆಯು ಅತ್ಯಾಧುನಿಕ ರಾಡಾರ್ ವ್ಯವಸ್ಥೆಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭ  ರಕ್ಷಣಾ ಸಿಬಂದಿಗಳು ಉಸಿರಾಟವನ್ನು ಸೂಚಿಸುವ ಸಂಕೇತವನ್ನು ಪತ್ತೆಹಚ್ಚಿದ್ದಾರೆ, ಆದರೆ ಇದು ಮನುಷ್ಯ ಅಥವಾ ಪ್ರಾಣಿಯದ್ದಾಗಿರಬಹುದು ಎಂದು ಹೇಳಿದ್ದಾರೆ.

ಭೂಕುಸಿತಕ್ಕೆ ತೀವ್ರ ಹಾನಿಗೊಳಗಾದ ಮುಂಡಕ್ಕೈ ಗ್ರಾಮದಲ್ಲಿ ಈ ಹಿಂದೆ ಮನೆ ಇದ್ದ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾಗ ರಾಡಾರ್‌ನಲ್ಲಿ ‘ಬ್ಲೂ ಸಿಗ್ನಲ್’ ಬಂದಿತ್ತು ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದ್ದಾರೆ. “ಉಸಿರಾಟದ ಸ್ಥಿರ ಸಂಕೇತವಿದೆ” ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದರು.ಕಟ್ಟಡದ ಅವಶೇಷಗಳು ಮಣ್ಣಿನ ಕೆಳಭಾಗದಲ್ಲಿ ಸುಮಾರು ಎರಡು-ಮೂರು ಮೀಟರ್ ಕೆಳಭಾಗದಲ್ಲಿ ಇದ್ದು , ಉಸಿರಾಟದ ಸಂಕೇತವು ಮನುಷ್ಯ ಅಥವಾ ಪ್ರಾಣಿಯದ್ದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.

ಸ್ಥಳೀಯ ನಿವಾಸಿಗಳ ಪ್ರಕಾರ, ಮನೆಯ ಅಡುಗೆ ಕೋಣೆ ಮತ್ತು ಸ್ಟೋರ್ ರೂಂ ಇರುವ ಪ್ರದೇಶದಲ್ಲಿ ಸಿಗ್ನಲ್ ಪತ್ತೆಯಾಗಿದೆ. ಈ  ಸಿಗ್ನಲ್ ಆಧರಿಸಿ, ರಕ್ಷಕರು ಸ್ಥಳಕ್ಕೆ ಅಗೆಯಲು ಪ್ರಾರಂಭಿಸಿದ್ದಾರೆ.

Source : PTI

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

3 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

18 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago