ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಪತ್ತೆ ಹಾಗೂ ಅವುಗಳ ಚಲನವಲನದ ಮಾಹಿತಿ ಪಡೆಯಲು ರೇಡಿಯೋ ಕಾಲರ್ ಅಳವಡಿಕೆಗೆ ಅರಣ್ಯ ಇಲಾಖೆ ಮುಂದಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬ್ಯಾದನೆ ಗ್ರಾಮದಲ್ಲಿ ಭುವನೇಶ್ವರಿ ಗುಂಪಿನ ಗಂಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿಯಾಗಿದೆ. ಮೊದಲ ದಿನದ ಕಾರ್ಯಾಚರಣೆ ವಿಫಲವಾಗಿತ್ತು, ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಏಳು ಕುಮ್ಕಿ ಕಾಡಾನೆಗಳನ್ನು ಬಳಸಿಕೊಂಡು ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ. ಡಾ.ರಮೇಶ್ ನೇತೃತ್ವದ ತಂಡ ಕಾಡಾನೆಗೆ ಅರಿವಳಿಕೆ ಮದ್ದು ನೀಡಿದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಈಟಿಎಫ್ ಸಿಬ್ಬಂದಿ ಸಹಯೋಗದಲ್ಲಿ ರೇಡಿಯೋ ಕಾಲರ್ ಅಳವಡಿಸಲಾಯಿತು. ಸ್ಥಳೀಯರು, ಸಾರ್ವಜನಿಕರಿಗೆ ಕಾಡಾನೆಗಳ ಲೊಕೇಶನ್ ತಿಳಿಸಲು ರೇಡಿಯೋ ಕಾಲರ್ ಅಳವಡಿಕೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…