ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಪತ್ತೆ ಹಾಗೂ ಅವುಗಳ ಚಲನವಲನದ ಮಾಹಿತಿ ಪಡೆಯಲು ರೇಡಿಯೋ ಕಾಲರ್ ಅಳವಡಿಕೆಗೆ ಅರಣ್ಯ ಇಲಾಖೆ ಮುಂದಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬ್ಯಾದನೆ ಗ್ರಾಮದಲ್ಲಿ ಭುವನೇಶ್ವರಿ ಗುಂಪಿನ ಗಂಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿಯಾಗಿದೆ. ಮೊದಲ ದಿನದ ಕಾರ್ಯಾಚರಣೆ ವಿಫಲವಾಗಿತ್ತು, ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಏಳು ಕುಮ್ಕಿ ಕಾಡಾನೆಗಳನ್ನು ಬಳಸಿಕೊಂಡು ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ. ಡಾ.ರಮೇಶ್ ನೇತೃತ್ವದ ತಂಡ ಕಾಡಾನೆಗೆ ಅರಿವಳಿಕೆ ಮದ್ದು ನೀಡಿದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಈಟಿಎಫ್ ಸಿಬ್ಬಂದಿ ಸಹಯೋಗದಲ್ಲಿ ರೇಡಿಯೋ ಕಾಲರ್ ಅಳವಡಿಸಲಾಯಿತು. ಸ್ಥಳೀಯರು, ಸಾರ್ವಜನಿಕರಿಗೆ ಕಾಡಾನೆಗಳ ಲೊಕೇಶನ್ ತಿಳಿಸಲು ರೇಡಿಯೋ ಕಾಲರ್ ಅಳವಡಿಕೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…