ಪುತ್ತೂರಿನ ಏಕೈಕ ಸಮುದಾಯ ಬಾನುಲಿ ಕೇಂದ್ರ, ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ವತಿಯಿಂದ 5ನೇ ಕೃಷಿಯಂತ್ರ ಮೇಳ ಮತ್ತು ಕನಸಿನ ಮನೆ ಸಂದರ್ಭ ಆಯೋಜಿಸಿದ್ದ ಕೃಷಿ ರಸಪ್ರಶ್ನೆ ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಲು ಕಾರಣವಾಯಿತು.
ಕೃಷಿ ಯಂತ್ರ ಮೇಳ 2023 ಮತ್ತು ಕನಸಿನ ಮನೆ ಕೃಷಿ ಯಂತ್ರಮೇಳದಲ್ಲಿ ರೇಡಿಯೋ ಪಾಂಚಜನ್ಯದ ವತಿಯಿಂದ ಕೃಷಿ ರಸಪ್ರಶ್ನೆ ಸ್ಪರ್ಧೆ ಪಿಯುಸಿ, ಪದವಿ, ಸ್ನಾತಕೋತ್ತರ, ವೃತ್ತಿಪರ ಮತ್ತು ಸಾರ್ವಜನಿಕ ವಿಭಾಗಕ್ಕೆ ನಡೆಸಲಾಯಿತು.ಬಹುಮಾನ ವಿಜೇತರು : ಪದವಿ ಪೂರ್ವ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಾದ ನಿರ್ಮಿತ್ ಮತ್ತು ಯೋಗವರ್ಧನ್ (ಪ್ರಥಮ ಚಿನ್ನದ ನಾಣ್ಯ), ಕಿರಣ್ರಾಜ್ ಮತ್ತು ಶರತ್ ಕುಮಾರ್ (ದ್ವಿತೀಯ ಬೆಳ್ಳಿ ನಾಣ್ಯ), ಸಚಿನ್ ಮತ್ತು ಹಿತೇಶ್ (ತೃತೀಯಸ್ಥಾನವಾಗಿ ದೀಪ) ಬಹುಮಾನವನ್ನು ಪಡೆದುಕೊಂಡಿರುತ್ತಾರೆ.
ಪದವಿ, ಸ್ನಾತಕೋತ್ತರ, ವೃತ್ತಿಪರ ವಿಭಾಗದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮನ್ವಿತ್ ಮತ್ತು ಪ್ರಜ್ವಲ್ಕೃಷ್ಣ (ಪ್ರಥಮ), ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶರಣ್ಯ ಎನ್. ಮತ್ತು ಸುಶ್ಮಿತಾ ಎಂ. (ದ್ವಿತೀಯ), ಶಿವಮೊಗ್ಗ ಎಗ್ರಿಕಲ್ಚರ್ ಕಾಲೇಜು ಇಲ್ಲಿನ ವಿದ್ಯಾರ್ಥಿಗಳಾದ ಗೌತಮಿ ಮತ್ತು ಜಸ್ಮಿತಾ (ತೃತೀಯ) ಬಹುಮಾನವನ್ನು ಪಡೆದುಕೊಂಡಿದ್ದಾರೆ. ಸಾರ್ವಜನಿಕ ವಿಭಾಗದಲ್ಲಿ ಸಂತೋಷ್ ಕುಮಾರ್ ಕೆ. (ಪ್ರಥಮ), ಸತ್ಯಶಂಕರ್ ಚೂಂತಾರ್(ದ್ವಿತೀಯ) ಮತ್ತು ವಸಂತ ಎನ್. (ತೃತೀಯ)ಬಹುಮಾನವನ್ನು ಪಡೆದುಕೊಂಡಿರುತ್ತಾರೆ.ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…