ಮನೆಮನೆಗೆ ರಾಘವ ರಾಮಾಯಣ | ಧರ್ಮಭಾರತಿ ವಿಶೇಷ ಅಭಿಯಾನ |

November 26, 2022
7:02 PM

ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆಯುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ತಲುಪಿಸುವ ವಿಶೇಷ ಅಭಿಯಾನವನ್ನು ಶ್ರೀ ರಾಮಚಂದ್ರಾಪುರ ಮಠದ ‘ಧರ್ಮಭಾರತಿ’ ಹಮ್ಮಿಕೊಂಡಿದೆ.

ಶ್ರೀಗಳ 30ನೇ ಚಾತುರ್ಮಾಸ್ಯದ ಅಂಗವಾಗಿ, ಮಹರ್ಷಿ ವಾಲ್ಮೀಕಿ ಬರೆದ ಮೂಲ ರಾಮಾಯಣದ ಪುನರವತರಣ ಇದಾಗಿರುತ್ತದೆ. ಮೊದಲಿಗೆ ಕನ್ನಡದಲ್ಲಿ ಹಾಗೂ ನಂತರ ವಿವಿಧ ಭಾಷೆಗಳಲ್ಲಿ ಇದನ್ನು ಪ್ರಕಟಿಸಲಾಗುವುದು ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಮಗ್ರ ರಾಮಾಯಣ ಮುಗಿಯುವವವರೆಗೆ ಧರ್ಮಭಾರತಿ ಮಾಸಿಕದ ಪ್ರತಿ ಸಂಚಿಕೆಯ ಪ್ರತಿ ಪುಟವೂ ರಾಮಾಯಣ ಮಯವಾಗಿರುತ್ತದೆ. ವಿಶೇಷವೆಂದರೆ ಧರ್ಮಭಾರತೀ ಇದನ್ನು ಉಚಿತವಾಗಿ ವಿತರಿಸುತ್ತದೆ. ಮೊದಲ ಹಂತದಲ್ಲಿ ಮೂವತ್ತು ಸಾವಿರಕ್ಕೂ ಹೆಚ್ಚು ಮನೆಗಳಿಗೆ ತಲುಪಲಿದೆ ಎಂದು ವಿವರಿಸಿದ್ದಾರೆ.

ಹತ್ತಾರು ಲಕ್ಷ ಜನರು ಮೂಲ ರಾಮಾಯಣವನ್ನು ಓದುವಂತೆ ಮಾಡುವ ಪ್ರಯತ್ನ ಇದಾಗಿದ್ದು, ಲಕ್ಷ ಲಕ್ಷ ಮನೆಗಳಲ್ಲಿ ನೂರಾರು ವರ್ಷ ರಾಮಾಯಣ ಪುಸ್ತಕ ಇರುವಂತೆ ಮಾಡುವ ಮಹದುದ್ದೇಶದ ಯೋಜನೆ ಇದಾಗಿದೆ. ಹಲವು ತಲೆಮಾರುಗಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror