ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆಯುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ತಲುಪಿಸುವ ವಿಶೇಷ ಅಭಿಯಾನವನ್ನು ಶ್ರೀ ರಾಮಚಂದ್ರಾಪುರ ಮಠದ ‘ಧರ್ಮಭಾರತಿ’ ಹಮ್ಮಿಕೊಂಡಿದೆ.
ಶ್ರೀಗಳ 30ನೇ ಚಾತುರ್ಮಾಸ್ಯದ ಅಂಗವಾಗಿ, ಮಹರ್ಷಿ ವಾಲ್ಮೀಕಿ ಬರೆದ ಮೂಲ ರಾಮಾಯಣದ ಪುನರವತರಣ ಇದಾಗಿರುತ್ತದೆ. ಮೊದಲಿಗೆ ಕನ್ನಡದಲ್ಲಿ ಹಾಗೂ ನಂತರ ವಿವಿಧ ಭಾಷೆಗಳಲ್ಲಿ ಇದನ್ನು ಪ್ರಕಟಿಸಲಾಗುವುದು ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ. ಸಮಗ್ರ ರಾಮಾಯಣ ಮುಗಿಯುವವವರೆಗೆ ಧರ್ಮಭಾರತಿ ಮಾಸಿಕದ ಪ್ರತಿ ಸಂಚಿಕೆಯ ಪ್ರತಿ ಪುಟವೂ ರಾಮಾಯಣ ಮಯವಾಗಿರುತ್ತದೆ. ವಿಶೇಷವೆಂದರೆ ಧರ್ಮಭಾರತೀ ಇದನ್ನು ಉಚಿತವಾಗಿ ವಿತರಿಸುತ್ತದೆ. ಮೊದಲ ಹಂತದಲ್ಲಿ ಮೂವತ್ತು ಸಾವಿರಕ್ಕೂ ಹೆಚ್ಚು ಮನೆಗಳಿಗೆ ತಲುಪಲಿದೆ ಎಂದು ವಿವರಿಸಿದ್ದಾರೆ. ಹತ್ತಾರು ಲಕ್ಷ ಜನರು ಮೂಲ ರಾಮಾಯಣವನ್ನು ಓದುವಂತೆ ಮಾಡುವ ಪ್ರಯತ್ನ ಇದಾಗಿದ್ದು, ಲಕ್ಷ ಲಕ್ಷ ಮನೆಗಳಲ್ಲಿ ನೂರಾರು ವರ್ಷ ರಾಮಾಯಣ ಪುಸ್ತಕ ಇರುವಂತೆ ಮಾಡುವ ಮಹದುದ್ದೇಶದ ಯೋಜನೆ ಇದಾಗಿದೆ. ಹಲವು ತಲೆಮಾರುಗಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…