ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆಯುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ತಲುಪಿಸುವ ವಿಶೇಷ ಅಭಿಯಾನವನ್ನು ಶ್ರೀ ರಾಮಚಂದ್ರಾಪುರ ಮಠದ ‘ಧರ್ಮಭಾರತಿ’ ಹಮ್ಮಿಕೊಂಡಿದೆ.
ಶ್ರೀಗಳ 30ನೇ ಚಾತುರ್ಮಾಸ್ಯದ ಅಂಗವಾಗಿ, ಮಹರ್ಷಿ ವಾಲ್ಮೀಕಿ ಬರೆದ ಮೂಲ ರಾಮಾಯಣದ ಪುನರವತರಣ ಇದಾಗಿರುತ್ತದೆ. ಮೊದಲಿಗೆ ಕನ್ನಡದಲ್ಲಿ ಹಾಗೂ ನಂತರ ವಿವಿಧ ಭಾಷೆಗಳಲ್ಲಿ ಇದನ್ನು ಪ್ರಕಟಿಸಲಾಗುವುದು ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ. ಸಮಗ್ರ ರಾಮಾಯಣ ಮುಗಿಯುವವವರೆಗೆ ಧರ್ಮಭಾರತಿ ಮಾಸಿಕದ ಪ್ರತಿ ಸಂಚಿಕೆಯ ಪ್ರತಿ ಪುಟವೂ ರಾಮಾಯಣ ಮಯವಾಗಿರುತ್ತದೆ. ವಿಶೇಷವೆಂದರೆ ಧರ್ಮಭಾರತೀ ಇದನ್ನು ಉಚಿತವಾಗಿ ವಿತರಿಸುತ್ತದೆ. ಮೊದಲ ಹಂತದಲ್ಲಿ ಮೂವತ್ತು ಸಾವಿರಕ್ಕೂ ಹೆಚ್ಚು ಮನೆಗಳಿಗೆ ತಲುಪಲಿದೆ ಎಂದು ವಿವರಿಸಿದ್ದಾರೆ. ಹತ್ತಾರು ಲಕ್ಷ ಜನರು ಮೂಲ ರಾಮಾಯಣವನ್ನು ಓದುವಂತೆ ಮಾಡುವ ಪ್ರಯತ್ನ ಇದಾಗಿದ್ದು, ಲಕ್ಷ ಲಕ್ಷ ಮನೆಗಳಲ್ಲಿ ನೂರಾರು ವರ್ಷ ರಾಮಾಯಣ ಪುಸ್ತಕ ಇರುವಂತೆ ಮಾಡುವ ಮಹದುದ್ದೇಶದ ಯೋಜನೆ ಇದಾಗಿದೆ. ಹಲವು ತಲೆಮಾರುಗಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…