Advertisement
ಧಾರ್ಮಿಕ

ಜು.24 ರಿಂದ ಚಾತುರ್ಮಾಸ್ಯ ಆರಂಭ | ರಾಘವೇಶ್ವರ ಶ್ರೀಗಳ ಪುರಪ್ರವೇಶ

Share

ಬೆಂಗಳೂರು: ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 28ನೇ ಚಾತುರ್ಮಾಸ ಆಷಾಢ ಪೂರ್ಣಿಮೆ (ಜುಲೈ 24) ಯಿಂದ ಭಾದ್ರಪದ ಪೂರ್ಣಿಮೆ (ಸೆಪ್ಟೆಂಬರ್ 20) ವರೆಗೆ ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ.

ಅರಿವಿನ ಹಣತೆಯ ಹಚ್ಚೋಣ- ವಿದ್ಯಾವಿಶ್ವವ ಕಟ್ಟೋಣ ಎಂಬ ಧ್ಯೇಯವಾಕ್ಯದೊಂದಿಗೆ ಈ ಚಾತುರ್ಮಾಸ್ಯವನ್ನು ವಿಶ್ವವಿದ್ಯಾ ಚಾತುರ್ಮಾಸ್ಯವಾಗಿ ಆಚರಿಸಲಾಗುತ್ತಿದೆ ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಯುಎಸ್‍ಜಿ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ವಾದಿರಾಜ ಸಾಮಗ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಚಾತುರ್ಮಾಸ್ಯ ಪೂರ್ವಭಾವಿಯಾಗಿ ಗುರುವಾರ ಮಧ್ಯಾಹ್ನ ಶ್ರೀಗಳ ಪುರಪ್ರವೇಶ ವೈಭವದಿಂದ ನಡೆಯಿತು.

ಪಾರಂಪರಿಕ ಶಿಕ್ಷಣದ ಜತೆಗೆ ನವಯುಗ ಶಿಕ್ಷಣವನ್ನೂ ನೀಡುವ ಮೂಲಕ ಸನಾತನ ಸಂಸ್ಕøತಿ- ಸಂಸ್ಕಾರವನ್ನು ಮಕ್ಕಳಿಗೆ ನೀಡಿ ಅವರಲ್ಲಿ ದೇಶಭಕ್ತಿ- ಧರ್ಮಶ್ರದ್ಧೆಯನ್ನು ಬೆಳೆಸುವ ಮಹಾಸಂಕಲ್ಪದಂತೆ ಉದಯಿಸಿ ಬೆಳಗುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠಕ್ಕೆ ಮೂಲವಾಗಿರುವ ಗುರುಕುಲಗಳು ಈ ಚಾತುರ್ಮಾಸ್ಯದ ಕೇಂದ್ರ ಬಿಂದುವಾಗಿರುತ್ತದೆ.ಗುರುಕುಲಗಳ ಬಗ್ಗೆ ಮಾಹಿತಿ ಪ್ರಸಾರ, ಘನ ಪಾರಾಯಣ, ವೇದ ಪಾರಾಯಣ, ಧನ್ವಂತರಿ ಹವನ, ಶ್ರೀಗಳ ವರ್ಧಂತಿ ಉತ್ಸವ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ಚಾತುರ್ಮಾಸ್ಯದ ಅವಧಿಯಲ್ಲಿ ನಡೆಯಲಿವೆ.
24ರಂದು ಮುಂಜಾನೆ 8ಕ್ಕೆ ಶ್ರೀಕರಾರ್ಚಿತ ಪೂಜೆ, ಬಳಿಕ ವ್ಯಾಸಪೂಜೆಯೊಂದಿಗೆ ಆರಂಭವಾಗಲಿರುವ ಚಾತುರ್ಮಾಸ್ಯ ವ್ರತ, ಸೆಪ್ಟೆಂಬರ್ 20ರಂದು ಸೀಮೋಲ್ಲಂಘನದೊಂದಿಗೆ ಸಂಪನ್ನವಾಗಲಿದೆ.

ಇಡೀ ಜಗತ್ತು ಕೋವಿಡ್-19 ಸಾಂಕ್ರಾಮಿಕದಿಂದ ತತ್ತರಿಸುತ್ತಿರುವ ಸನ್ನಿವೇಶದಲ್ಲಿ ಚಾತುರ್ಮಾಸ್ಯ ಅವಧಿಯಲ್ಲಿ ಸರ್ಕಾರ ಸೂಚಿಸುವ ಎಲ್ಲ ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಿದ್ದು, ಭಿಕ್ಷಾಸೇವೆ, ಪಾದುಕಾಪೂಜೆಯಂಥ ಧಾರ್ಮಿಕ ವಿಧಿವಿಧಾನದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದ್ದು, ಶಿಷ್ಯರು ಸಹಕರಿಸಬೇಕು ಎಂದು ಪ್ರಕಟಣೆ ಮನವಿ ಮಾಡಿದೆ.

ವಿಶ್ವವಿದ್ಯಾ ಚಾತುರ್ಮಾಸ್ಯದಲ್ಲಿ ಸಂಗ್ರಹವಾಗುವ ಮೊತ್ತದಲ್ಲಿ ದೊಡ್ಡ ನಿಧಿಯೊಂದನ್ನು ವಿಶ್ವವಿದ್ಯಾಪೀಠದ ವಾರ್ಷಿಕ ನಿರ್ವಹಣೆಗಾಗಿ ಸಮರ್ಪಿಸಲು ಉದ್ದೇಶಿಸಿದ್ದು ಶಿಷ್ಯ ಭಕ್ತರು ದೇಶದ ಭವಿಷ್ಯವನ್ನೇ ಬದಲಿಸಬಲ್ಲ ಈ ವಿಶ್ವವಿದ್ಯಾಪೀಠ ಕಟ್ಟುವಲ್ಲಿ ಕೈಜೋಡಿಸಬೇಕು ಎಂದು ಸಂಘಟಕರು ಕೋರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

2 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

2 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

10 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

15 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

15 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

16 hours ago