Advertisement
ಧಾರ್ಮಿಕ

ಜು.24 ರಿಂದ ಚಾತುರ್ಮಾಸ್ಯ ಆರಂಭ | ರಾಘವೇಶ್ವರ ಶ್ರೀಗಳ ಪುರಪ್ರವೇಶ

Share

ಬೆಂಗಳೂರು: ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 28ನೇ ಚಾತುರ್ಮಾಸ ಆಷಾಢ ಪೂರ್ಣಿಮೆ (ಜುಲೈ 24) ಯಿಂದ ಭಾದ್ರಪದ ಪೂರ್ಣಿಮೆ (ಸೆಪ್ಟೆಂಬರ್ 20) ವರೆಗೆ ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ.

Advertisement

ಅರಿವಿನ ಹಣತೆಯ ಹಚ್ಚೋಣ- ವಿದ್ಯಾವಿಶ್ವವ ಕಟ್ಟೋಣ ಎಂಬ ಧ್ಯೇಯವಾಕ್ಯದೊಂದಿಗೆ ಈ ಚಾತುರ್ಮಾಸ್ಯವನ್ನು ವಿಶ್ವವಿದ್ಯಾ ಚಾತುರ್ಮಾಸ್ಯವಾಗಿ ಆಚರಿಸಲಾಗುತ್ತಿದೆ ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಯುಎಸ್‍ಜಿ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ವಾದಿರಾಜ ಸಾಮಗ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಚಾತುರ್ಮಾಸ್ಯ ಪೂರ್ವಭಾವಿಯಾಗಿ ಗುರುವಾರ ಮಧ್ಯಾಹ್ನ ಶ್ರೀಗಳ ಪುರಪ್ರವೇಶ ವೈಭವದಿಂದ ನಡೆಯಿತು.

ಪಾರಂಪರಿಕ ಶಿಕ್ಷಣದ ಜತೆಗೆ ನವಯುಗ ಶಿಕ್ಷಣವನ್ನೂ ನೀಡುವ ಮೂಲಕ ಸನಾತನ ಸಂಸ್ಕøತಿ- ಸಂಸ್ಕಾರವನ್ನು ಮಕ್ಕಳಿಗೆ ನೀಡಿ ಅವರಲ್ಲಿ ದೇಶಭಕ್ತಿ- ಧರ್ಮಶ್ರದ್ಧೆಯನ್ನು ಬೆಳೆಸುವ ಮಹಾಸಂಕಲ್ಪದಂತೆ ಉದಯಿಸಿ ಬೆಳಗುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠಕ್ಕೆ ಮೂಲವಾಗಿರುವ ಗುರುಕುಲಗಳು ಈ ಚಾತುರ್ಮಾಸ್ಯದ ಕೇಂದ್ರ ಬಿಂದುವಾಗಿರುತ್ತದೆ.ಗುರುಕುಲಗಳ ಬಗ್ಗೆ ಮಾಹಿತಿ ಪ್ರಸಾರ, ಘನ ಪಾರಾಯಣ, ವೇದ ಪಾರಾಯಣ, ಧನ್ವಂತರಿ ಹವನ, ಶ್ರೀಗಳ ವರ್ಧಂತಿ ಉತ್ಸವ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ಚಾತುರ್ಮಾಸ್ಯದ ಅವಧಿಯಲ್ಲಿ ನಡೆಯಲಿವೆ.
24ರಂದು ಮುಂಜಾನೆ 8ಕ್ಕೆ ಶ್ರೀಕರಾರ್ಚಿತ ಪೂಜೆ, ಬಳಿಕ ವ್ಯಾಸಪೂಜೆಯೊಂದಿಗೆ ಆರಂಭವಾಗಲಿರುವ ಚಾತುರ್ಮಾಸ್ಯ ವ್ರತ, ಸೆಪ್ಟೆಂಬರ್ 20ರಂದು ಸೀಮೋಲ್ಲಂಘನದೊಂದಿಗೆ ಸಂಪನ್ನವಾಗಲಿದೆ.

ಇಡೀ ಜಗತ್ತು ಕೋವಿಡ್-19 ಸಾಂಕ್ರಾಮಿಕದಿಂದ ತತ್ತರಿಸುತ್ತಿರುವ ಸನ್ನಿವೇಶದಲ್ಲಿ ಚಾತುರ್ಮಾಸ್ಯ ಅವಧಿಯಲ್ಲಿ ಸರ್ಕಾರ ಸೂಚಿಸುವ ಎಲ್ಲ ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಿದ್ದು, ಭಿಕ್ಷಾಸೇವೆ, ಪಾದುಕಾಪೂಜೆಯಂಥ ಧಾರ್ಮಿಕ ವಿಧಿವಿಧಾನದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದ್ದು, ಶಿಷ್ಯರು ಸಹಕರಿಸಬೇಕು ಎಂದು ಪ್ರಕಟಣೆ ಮನವಿ ಮಾಡಿದೆ.

ವಿಶ್ವವಿದ್ಯಾ ಚಾತುರ್ಮಾಸ್ಯದಲ್ಲಿ ಸಂಗ್ರಹವಾಗುವ ಮೊತ್ತದಲ್ಲಿ ದೊಡ್ಡ ನಿಧಿಯೊಂದನ್ನು ವಿಶ್ವವಿದ್ಯಾಪೀಠದ ವಾರ್ಷಿಕ ನಿರ್ವಹಣೆಗಾಗಿ ಸಮರ್ಪಿಸಲು ಉದ್ದೇಶಿಸಿದ್ದು ಶಿಷ್ಯ ಭಕ್ತರು ದೇಶದ ಭವಿಷ್ಯವನ್ನೇ ಬದಲಿಸಬಲ್ಲ ಈ ವಿಶ್ವವಿದ್ಯಾಪೀಠ ಕಟ್ಟುವಲ್ಲಿ ಕೈಜೋಡಿಸಬೇಕು ಎಂದು ಸಂಘಟಕರು ಕೋರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

9 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago