Advertisement
ಧಾರ್ಮಿಕ

ಜು.24 ರಿಂದ ಚಾತುರ್ಮಾಸ್ಯ ಆರಂಭ | ರಾಘವೇಶ್ವರ ಶ್ರೀಗಳ ಪುರಪ್ರವೇಶ

Share

ಬೆಂಗಳೂರು: ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 28ನೇ ಚಾತುರ್ಮಾಸ ಆಷಾಢ ಪೂರ್ಣಿಮೆ (ಜುಲೈ 24) ಯಿಂದ ಭಾದ್ರಪದ ಪೂರ್ಣಿಮೆ (ಸೆಪ್ಟೆಂಬರ್ 20) ವರೆಗೆ ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ.

ಅರಿವಿನ ಹಣತೆಯ ಹಚ್ಚೋಣ- ವಿದ್ಯಾವಿಶ್ವವ ಕಟ್ಟೋಣ ಎಂಬ ಧ್ಯೇಯವಾಕ್ಯದೊಂದಿಗೆ ಈ ಚಾತುರ್ಮಾಸ್ಯವನ್ನು ವಿಶ್ವವಿದ್ಯಾ ಚಾತುರ್ಮಾಸ್ಯವಾಗಿ ಆಚರಿಸಲಾಗುತ್ತಿದೆ ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಯುಎಸ್‍ಜಿ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ವಾದಿರಾಜ ಸಾಮಗ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಚಾತುರ್ಮಾಸ್ಯ ಪೂರ್ವಭಾವಿಯಾಗಿ ಗುರುವಾರ ಮಧ್ಯಾಹ್ನ ಶ್ರೀಗಳ ಪುರಪ್ರವೇಶ ವೈಭವದಿಂದ ನಡೆಯಿತು.

ಪಾರಂಪರಿಕ ಶಿಕ್ಷಣದ ಜತೆಗೆ ನವಯುಗ ಶಿಕ್ಷಣವನ್ನೂ ನೀಡುವ ಮೂಲಕ ಸನಾತನ ಸಂಸ್ಕøತಿ- ಸಂಸ್ಕಾರವನ್ನು ಮಕ್ಕಳಿಗೆ ನೀಡಿ ಅವರಲ್ಲಿ ದೇಶಭಕ್ತಿ- ಧರ್ಮಶ್ರದ್ಧೆಯನ್ನು ಬೆಳೆಸುವ ಮಹಾಸಂಕಲ್ಪದಂತೆ ಉದಯಿಸಿ ಬೆಳಗುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠಕ್ಕೆ ಮೂಲವಾಗಿರುವ ಗುರುಕುಲಗಳು ಈ ಚಾತುರ್ಮಾಸ್ಯದ ಕೇಂದ್ರ ಬಿಂದುವಾಗಿರುತ್ತದೆ.ಗುರುಕುಲಗಳ ಬಗ್ಗೆ ಮಾಹಿತಿ ಪ್ರಸಾರ, ಘನ ಪಾರಾಯಣ, ವೇದ ಪಾರಾಯಣ, ಧನ್ವಂತರಿ ಹವನ, ಶ್ರೀಗಳ ವರ್ಧಂತಿ ಉತ್ಸವ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ಚಾತುರ್ಮಾಸ್ಯದ ಅವಧಿಯಲ್ಲಿ ನಡೆಯಲಿವೆ.
24ರಂದು ಮುಂಜಾನೆ 8ಕ್ಕೆ ಶ್ರೀಕರಾರ್ಚಿತ ಪೂಜೆ, ಬಳಿಕ ವ್ಯಾಸಪೂಜೆಯೊಂದಿಗೆ ಆರಂಭವಾಗಲಿರುವ ಚಾತುರ್ಮಾಸ್ಯ ವ್ರತ, ಸೆಪ್ಟೆಂಬರ್ 20ರಂದು ಸೀಮೋಲ್ಲಂಘನದೊಂದಿಗೆ ಸಂಪನ್ನವಾಗಲಿದೆ.

ಇಡೀ ಜಗತ್ತು ಕೋವಿಡ್-19 ಸಾಂಕ್ರಾಮಿಕದಿಂದ ತತ್ತರಿಸುತ್ತಿರುವ ಸನ್ನಿವೇಶದಲ್ಲಿ ಚಾತುರ್ಮಾಸ್ಯ ಅವಧಿಯಲ್ಲಿ ಸರ್ಕಾರ ಸೂಚಿಸುವ ಎಲ್ಲ ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಿದ್ದು, ಭಿಕ್ಷಾಸೇವೆ, ಪಾದುಕಾಪೂಜೆಯಂಥ ಧಾರ್ಮಿಕ ವಿಧಿವಿಧಾನದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದ್ದು, ಶಿಷ್ಯರು ಸಹಕರಿಸಬೇಕು ಎಂದು ಪ್ರಕಟಣೆ ಮನವಿ ಮಾಡಿದೆ.

ವಿಶ್ವವಿದ್ಯಾ ಚಾತುರ್ಮಾಸ್ಯದಲ್ಲಿ ಸಂಗ್ರಹವಾಗುವ ಮೊತ್ತದಲ್ಲಿ ದೊಡ್ಡ ನಿಧಿಯೊಂದನ್ನು ವಿಶ್ವವಿದ್ಯಾಪೀಠದ ವಾರ್ಷಿಕ ನಿರ್ವಹಣೆಗಾಗಿ ಸಮರ್ಪಿಸಲು ಉದ್ದೇಶಿಸಿದ್ದು ಶಿಷ್ಯ ಭಕ್ತರು ದೇಶದ ಭವಿಷ್ಯವನ್ನೇ ಬದಲಿಸಬಲ್ಲ ಈ ವಿಶ್ವವಿದ್ಯಾಪೀಠ ಕಟ್ಟುವಲ್ಲಿ ಕೈಜೋಡಿಸಬೇಕು ಎಂದು ಸಂಘಟಕರು ಕೋರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

10 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

14 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago